ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅಶ್ವತಿ ಪಿ.ವಿ. (24) ಮೃತಪಟ್ಟ ದುರ್ದೈವಿ. ಕಾಸರಗೋಡು ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕುಟ್ಟಿಕ್ಕೋಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇತೂರುಪಾರದ ವಟ್ಟಂತಟ್ಟ ನಿವಾಸಿಯಾದ ಪುಷ್ಪಾ ಮತ್ತು ದಿವಂಗತ ಸುಕು ದಂಪತಿಯ ಪುತ್ರಿ ಅಶ್ವತಿ, ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಕಳೆದ ಏಪ್ರಿಲ್ 5 ರಂದು ಕೊಡೋಂ-ಬೇಲೂರು ಗ್ರಾಮ ಪಂಚಾಯತ್ನ ಪರಕ್ಕಲೈ ಬಳಿಯ ಚೀತಕ್ಕಾವು ಮೂಲದ ಹತ್ತಿರದ ಸಂಬಂಧಿ ರೂಪೇಶ್ ಎಂಬುವವರೊಂದಿಗೆ ವಿವಾಹವಾಗಿತ್ತು. ಮದುವೆಯಾಗಿ ಅತ್ಯಂತ ಸಂತೋಷದಿಂದ ಇರಬೇಕಾಗಿದ್ದ ಯುವತಿ, ಮೇ 18 ರಂದು ಕಾಸರಗೋಡು ಪಟ್ಟಣದ ಮನೆಯಲ್ಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಇದನ್ನೂ ಓದಿ:
ವಿಷ ಸೇವಿಸಿ ಅಶ್ವತಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದರಿಂದ, ಅವರನ್ನು ತಕ್ಷಣವೇ ಪರಿಯಾರಂನಲ್ಲಿರುವ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.
ಇಂಧನ ದರ ಏರಿಕೆ : ಏರ್ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ…
ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು ಹೊಸದಿಲ್ಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಮಾಜಿ…
ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ…
ಕೊಂಕಣ ರೈಲ್ವೆ ಮಾನ್ಸೂನ್ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ ಉಡುಪಿ: ಮುಂಗಾರು ಸವಾಲಿಗೆ…
ಜೂ.12ರವರೆಗೆ ಮಂಗಳೂರು ಜಂಕ್ಷನ್ - ಮುಂಬೈ ಸಿಎಸ್ಎಂಟಿ ರೈಲು ಥಾಣೆಯವರೆಗೆ ಸಂಚಾರ ಮಂಗಳೂರು: ಮುಂಬೈ ಸಿಎಸ್ಎಂಟೆ ನಿಲ್ದಾಣದಲ್ಲಿ ಪ್ಲಾಟ್ಫಾರಂ ವಿಸ್ತರಣಾ…
ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಸಾಧ್ಯತೆ: ಕರಾವಳಿಯಲ್ಲಿ ಮತ್ತೆ ಬಿಸಿಲು ಮಂಗಳೂರು : ಕರ್ನಾಟಕಕ್ಕೆ ಮುಂಗಾರು ಮಾರುತಗಳ ಪ್ರವೇಶ ಕೊಂಚ ವಿಳಂಬವಾಗುವ…