ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾದ ಪೆರಿಯ ಕಳ್ಳಿಯೊಟ್ ನ ಶರತ್ ಲಾಲ್(19) ಮತ್ತು ಕೃಪೇಶ್ (20) ಹತ್ಯೆ ಪ್ರಕರಣದಲ್ಲಿ 14 ಆರೋಪಿಗಳನ್ನು ಎರ್ನಾಕುಲಂ ಸಿಬಿಐ ಕೋರ್ಟ್ ದೋಷಿಗಳೆಂದು ತೀರ್ಪು ನೀಡಿದೆ.
ಮಾಜಿ ಶಾಸಕ ಕೆ.ವಿ.ಕುಂಞಿರಾಮನ್ ಸೇರಿದಂತೆ 14 ಆರೋಪಿಗಳು. ನ್ಯಾಯಾಲಯ 10 ಮಂದಿಯನ್ನು ಖುಲಾಸೆಗೊಳಿಸಿದೆ. 1 ರಿಂದ 10 ಆರೋಪಿಗಳ ಮೇಲೆ ಕೊಲೆ ಆರೋಪವಿದ್ದು, ಶಿಕ್ಷೆಗೊಳಗಾದ 14 ಮಂದಿಯಲ್ಲಿ ಹತ್ತು ಮಂದಿ ಪ್ರಮುಖ ಸಿಪಿಎಂ ನಾಯಕರು.
ಎ ಪೀತಾಂಬರನ್, ಸಿಪಿಎಂ ಪೆರಿಯ ಸ್ಥಳೀಯ ಸಮಿತಿಯ ಮಾಜಿ ಸದಸ್ಯ, ಸಾಜಿ ಸಿ. ಜಾರ್ಜ್, ಕೆ.ಎಂ. ಸುರೇಶ್, ಕೆ. ಅನಿಲ್ ಕುಮಾರ್, ಜಿಜಿನ್, ಆರ್. ಶ್ರೀರಾಗ್, ಎ. ಅಶ್ವಿನ್ ಮತ್ತು ಸುಬಿಶ್ ಕೊಲೆ ಆರೋಪಿಗಳು. ಒಂಬತ್ತನೇ ಪ್ರತಿವಾದಿ ಎ ಮುರಳಿ, ಟಿ ರಂಜಿತ್, ಕೆ. ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ. ಮಣಿಕಂಠನ್, ಎ. ಸುರೇಂದ್ರನ್, ಉದುಮ ಮಾಜಿ ಶಾಸಕ ಕೆ.ವಿ. ಕುಂಞಿರಾಮನ್, ರಾಘವನ್ ವೆಲ್ತೋಳಿ ಮತ್ತು ಕೆ.ವಿ.ಭಾಸ್ಕರನ್ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ನ್ಯಾಯಾಲಯ 292 ಸಾಕ್ಷಿಗಳನ್ನು ವಿಚಾರಣೆ ನಡೆಸಿತ್ತು. ಫೆಬ್ರವರಿ 17, 2019 ರಂದು ಕೊಲೆ ನಡೆದಿತ್ತು. ಮೊದಲಿಗೆ ಸ್ಥಳೀಯ ಪೊಲೀಸರ ವಿಶೇಷ ತಂಡ ಹಾಗೂ ನಂತರ ಅಪರಾಧ ವಿಭಾಗದ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು.
ಶರತ್ ಲಾಲ್ ಮತ್ತು ಕೃಪೇಶ್ ಅವರ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದಾಗ ಸಿಬಿಐ ತನಿಖೆಯನ್ನು ಕೈಗೆತ್ತಿಕೊಂಡಿತು. ತಿರುವನಂತಪುರ ಘಟಕದ ಡಿವೈಎಸ್ಪಿ ಅನಂತಕೃಷ್ಣನ್ ನೇತೃತ್ವದ ಸಿಬಿಐ ತಂಡ ತನಿಖೆ ನಡೆಸಿತು. ಫೆಬ್ರವರಿ 2023 ರಲ್ಲಿ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ಆರಂಭಗೊಂಡಿತ್ತು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…