ಕಾಸರಗೋಡು: ಬದಿಯಡ್ಕ ದಿಂದ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ.
ಬದಿಯಡ್ಕ ದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿ (57) ಮೃತ ಪಟ್ಟವರು.
ರೈಲ್ವೆ ಹಳಿಯಲ್ಲಿ ಮೃತ ದೇಹ ಪತ್ತೆಯಾದ ಬಗ್ಗೆ ಲಭಿಸಿದ ಮಾಹಿತಿಯಂತೆ ಕೃಷ್ಣ ಮೂರ್ತಿ ರವರ ಕುಟುಂಬಸ್ಥರು ಕುಂದಾಪುರಕ್ಕೆ ತೆರಳಿ ಗುರುತು ಪತ್ತೆ ಹಚ್ಚಿ ದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಊರಿಗೆ ತರಲಾಗುವುದು. ನವಂಬರ್ ಎಂಟರಂದು ಮಧ್ಯಾಹ್ನ ಬಳಿಕ ವೈದ್ಯರು ನಾಪತ್ತೆಯಾಗಿದ್ದರು. ಈ ಬಗ್ಗೆ ಪತ್ನಿ ನೀಡಿದ ದೂರಿನಂತೆ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ದ್ದರು.ವೈದ್ಯರ ಬೈಕ್ ಕುಂಬಳೆ ಪೇಟೆಯಲ್ಲಿ ಪತ್ತೆಯಾಗಿತ್ತು. ಮೊಬೈಲ್ ಕ್ಲಿನಿಕ್ ನಲ್ಲೇ ಬಿಟ್ಟು ತೆರಳಿದ್ದರು.
ಕಡಬ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಡಿಕ್ಕಿ ..4 ವರ್ಷ ಪ್ರಾಯದ ಬಾಲಕ ಸಾವು – Vishwanews24
ಕ್ಲಿನಿಕ್ ಗೆ ಬಂದಿದ್ದ ಮಹಿಳೆ ಜೊತೆ ವೈದ್ಯರು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು , ಈ ಬಗ್ಗೆ ತಂಡವೊಂದು ಕ್ಲಿನಿಕ್ ಗೆ ತೆರಳಿ ವೈದ್ಯರನ್ನು ತರಾಟೆಗೆ ತೆಗೆದು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ . ಇದಲ್ಲದೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಈ ಬೆಳವಣಿಗೆ ಬಳಿಕ ಡಾ . ಕೃಷ್ಣಮೂರ್ತಿ ನಿಗೂಢವಾಗಿ ನಾಪತ್ತೆಯಾಗಿದ್ದರು
ನಾಪತ್ತೆ ಹಿನ್ನಲೆಯಲ್ಲಿ ಬದಿಯಡ್ಕ ಪೊಲೀಸರು ಕೇರಳ ಹಾಗೂ ಕರ್ನಾಟಕದ ಪೊಲೀಸ್ ಠಾಣೆ ಗಳಿಗೆ ಮಾಹಿತಿ ನೀಡಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…