Featured

ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ : ಹೆಚ್.ಡಿ.ಕುಮಾರಸ್ವಾಮಿ -Vishwanews24

ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ : ಹೆಚ್.ಡಿ.ಕುಮಾರಸ್ವಾಮಿ -Vishwanews24

ಬೆಂಗಳೂರು : ಭಾಷಾ ಸಾಮರಸ್ಯದ ವಿಚಾರದಲ್ಲಿ ಕರ್ನಾಟಕ-ಕೇರಳ ರಾಜ್ಯಗಳು ಪರಸ್ಪರ ಪೂರಕವಾಗಿ ನಡೆದುಕೊಂಡು ಬಂದಿವೆ. ಆದರೂ ಹೆಸರು ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದ್ದು ಹೇಗೆ. ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿವಾದದ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಈ ಪ್ರಯತ್ನವು ಸಾಮರಸ್ಯವನ್ನು ಕೆಡಿಸುವ ಉದ್ದೇಶವನ್ನೇ ಹೊಂದಿದ್ದರೆ ಎರಡೂ ರಾಜ್ಯಗಳು ಜಾಗೃತರಾಗಬೇಕಾದ ಅಗತ್ಯವಿದೆ ಎಂದಿದ್ದಾರೆ.

ಕಾಸರಗೋಡಿನಲ್ಲಿ ಕನ್ನಡಕ್ಕೆ ಧಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರ ಶಾಸಕ ಅಶ್ರಫ್ ಹೇಳಿದ್ದಾರೆ.ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದ ಅಶ್ರಫ್ ಹೇಳಿಕೆಯು ಮತ್ತಷ್ಟು ಸಮಾಧಾನ ತಂದಿದೆ. ಕನ್ನಡಪರವಾದ ನಿಲುವು ಪ್ರಕಟಿಸಿರುವ ಅಶ್ರಫ್ ಅವರನ್ನು ಅಭಿನಂದಿಸುವುದಾಗಿ ಅವರು ಹೇಳಿದ್ದಾರೆ.

ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ ಎಂದು ಅವರು ತಿಳಿಸಿದ್ದಾರೆ.

ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಬಗ್ಗೆ ಅತಿ ಶೀಘ್ರದಲ್ಲೇ ಕೇರಳ ಸರ್ಕಾರದಿಂದ ಸ್ಪಷ್ಟೆನೆ ಬರುವಂತೆ ಮಾಡಿದ್ದಾರೆ. ಈ ಸಾತ್ವಿಕ ಹೋರಾಟದಲ್ಲಿ ಭಾಗಿಯಾದ ಕನ್ನಡ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಅವರು ಹೇಳಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago