Featured

ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಖ್ಯಾತಿಯ ಆದೂರು ಚಿನ್ನು ಪಾಪು ಆತ್ಮಹತ್ಯೆ – vishwanews24

ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಖ್ಯಾತಿಯ ಆದೂರು ಚಿನ್ನು ಪಾಪು ಆತ್ಮಹತ್ಯೆ

ಕಾಸರಗೋಡು : ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಮೂಲದ ಚಿನ್ನು ಪಾಪು (ರೇಶ್ಮಾ 24) ಕಾಸರಗೋಡು ನಗರ ಹೊರ ವಲಯದ ಉಳಿಯತ್ತಡ್ಕದ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೇಶ್ಮಾ ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸೋಮವಾರ ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಈಕೆಯನ್ನು ಸ್ಥಳಿಯರು ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ :

ಚಿನ್ನು ಪಾಪು ಎಂದೇ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಕಾಣಿಸಿಕೊಂಡು ಕಾಸರಗೋಡು ಭಾಷೆಯಲ್ಲೇ ಮಾತನಾಡಿ ಜನಪ್ರಿಯತೆ ಪಡೆದಿದ್ದ ಈಕೆಗೆ 2 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ರೇಶ್ಮಾ ಈ ಮೊದಲೇ ವಿವಾಹಿತಳಾಗಿದ್ದು, ಒಂದು ಮಗುವನ್ನೂ ಹೊಂದಿದ್ದ ಈಕೆ ಪತಿಯಿಂದ ವಿಚ್ಛೇದಿತಳಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಸಾಮಾಜಿಕ ಜಾಲತಾಣದ ಪ್ರಭಾವೀ ವೇದಿಕೆಯಲ್ಲಿ ಕಾಣಿಸಿಕೊಂಡು ಅಪಾರ ವೀಕ್ಷಕರನ್ನು ಹೊಂದಿದ್ದ ಈಕೆಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿಚ್ಚೇದನದಿಂದ ಮಾನಸಿಕ ಒತ್ತಡ ಅಥವಾ ಇನ್ಯಾವುದೇ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ರೇಶ್ಮಾಳ ಮೊಬೈಲ್ ನ್ನು ತಪಾಸಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು  ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…

8 minutes ago

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

18 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

19 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

22 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

22 hours ago