ಕಾಸರಗೋಡು : ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಮೂಲದ ಚಿನ್ನು ಪಾಪು (ರೇಶ್ಮಾ 24) ಕಾಸರಗೋಡು ನಗರ ಹೊರ ವಲಯದ ಉಳಿಯತ್ತಡ್ಕದ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರೇಶ್ಮಾ ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸೋಮವಾರ ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಈಕೆಯನ್ನು ಸ್ಥಳಿಯರು ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ :
ಚಿನ್ನು ಪಾಪು ಎಂದೇ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಕಾಣಿಸಿಕೊಂಡು ಕಾಸರಗೋಡು ಭಾಷೆಯಲ್ಲೇ ಮಾತನಾಡಿ ಜನಪ್ರಿಯತೆ ಪಡೆದಿದ್ದ ಈಕೆಗೆ 2 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ರೇಶ್ಮಾ ಈ ಮೊದಲೇ ವಿವಾಹಿತಳಾಗಿದ್ದು, ಒಂದು ಮಗುವನ್ನೂ ಹೊಂದಿದ್ದ ಈಕೆ ಪತಿಯಿಂದ ವಿಚ್ಛೇದಿತಳಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಸಾಮಾಜಿಕ ಜಾಲತಾಣದ ಪ್ರಭಾವೀ ವೇದಿಕೆಯಲ್ಲಿ ಕಾಣಿಸಿಕೊಂಡು ಅಪಾರ ವೀಕ್ಷಕರನ್ನು ಹೊಂದಿದ್ದ ಈಕೆಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿಚ್ಚೇದನದಿಂದ ಮಾನಸಿಕ ಒತ್ತಡ ಅಥವಾ ಇನ್ಯಾವುದೇ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ರೇಶ್ಮಾಳ ಮೊಬೈಲ್ ನ್ನು ತಪಾಸಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಇದನ್ನೂ ಓದಿ :
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…