ಕಾಸರಗೋಡು : ತುಳುನಾಡಿನ ಆಚಾರ ವಿಚಾರ ಲಿಪಿ ಸಂಸ್ಕ್ರತಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯುತ ಕೆಲಸ ಕಾರ್ಯಗಳನ್ನು ನಿಸ್ವಾರ್ಥವಾಗಿ ಮಾಡಲು ಯುವಕರು ಹಾಗೂ ಹಿರಿಯರು ಒಗ್ಗೂಡಿಕೊಂಡು ಒಂದಾಗಿರುವ ಸಂಘಟನೆ ‘ಜೈ ತುಳುನಾಡ್ ಸಂಘಟನೆ’ ಇದರ ಕಾಸರಗೋಡು ಘಟಕದಿಂದ ಘಟಕದ ಅಧ್ಯಕ್ಷ ಹರಿಕಾಂತ್ ಕಾಸರಗೋಡು ಇವರ ಮುಂದಾಳುತ್ವದಲ್ಲಿ, ಕೇರಳ ರಾಜ್ಯದಲ್ಲಿ ತುಳು ಬಾಷೆ ಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವ ಬೇಡಿಕೆಯನ್ನು ಸರಕಾರದ ಗಮನಕ್ಕೆ ತರಬೇಕು ಎಂದು ಶಾಸಕರ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಯಿತು.
ದಾಖಲೆಯ ಜೊತೆಗಿರುವ ಮನವಿಯನ್ನು ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಹಾಗೂ ಕ್ಷೇತ್ರದ ಪ್ರಸ್ತುತ ಶಾಸಕರಾದ ಸಿ ಯೆಚ್ ಕುಂಞಂಬುರವರಿಗೂ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಘಟಕದ ಸದಸ್ಯರ ಜೊತೆ ಮಾತನಾಡಿದ ಶಾಸಕ ಎ ಕೆ ಎಂ ಅಶ್ರಫ್ ಮುಂಬರುವ ಅಧಿವೇಶನದಲ್ಲಿ ಈ ವಿಷಯವನ್ನು ಸರಕಾರದ ಗಮನಕ್ಕೆ ತಂದು ಮನವರಿಕೆ ಮಾಡುವುದಾಗಿ ಭರವಸೆ ನೀಡಿದರು ಹಾಗೂ ಉದುಮ ಶಾಸಕ ಸಿ . ಎಚ್ ಕುಂಞಂಬು ಮಾತನಾಡಿ ತುಳು ಭಾಷೆಯನ್ನು ಕೇರಳದ ಅಧಿಕೃತ ಭಾಷೆಯನ್ನಾಗಿ ಮಾಡುವ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಪ್ರಯತ್ನಿಸುವುದಾಗಿ ಎಂದು ಭರವಸೆ ನೀಡಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಜೈ ತುಳುನಾಡ್ ಕಾಸರಗೋಡು ಘಟಕದ ಅಧ್ಯಕ್ಷ ಹರಿಕಾಂತ್ ಕಾಸರಗೋಡು, ಕಾರ್ಯದರ್ಶಿ ಕಾರ್ತಿಕ್ ಪೆರ್ಲ, ಕೋಶಾಧಿಕಾರಿ ಪ್ರಶಾಂತ್ ರೈ ಬಂದಡ್ಕ, ಮುಖ್ಯ ಸಂಚಾಲಕ ಪ್ರವೀಶ್ ಕುಲಾಲ್ ಹಾಗು ಸದಸ್ಯ ದೇವಿಪ್ರಸಾದ್ ರೈ ಉಪಸ್ಥಿತರಿದ್ದರು
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…