ಕಾಸರಗೋಡು: ದೇವಸ್ಥಾನದಲ್ಲಿ ಪಟಾಕಿ ದುರಂತ; ಮೃತರ ಸಂಖ್ಯೆ 4ಕ್ಕೆ ಏರಿಕೆ – vishwanews24

Featured, ರಾಜ್ಯ ನ್ಯೂಸ್

ಕಾಸರಗೋಡು: ದೇವಸ್ಥಾನದಲ್ಲಿ ಪಟಾಕಿ ದುರಂತ; ಮೃತರ ಸಂಖ್ಯೆ 4ಕ್ಕೆ ಏರಿಕೆ

ಕಾಸರಗೋಡು: ನೀಲೇಶ್ವರ ವಿರಾರ್ ಕಾವ್ ದೈವಸ್ಥಾನದ ಕಳಿ ಯಾಟ ಮಹೋತ್ಸವದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟ ದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ.

ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ ಕೆ. ಬಿಜು (37), ಚೆರ್ವತ್ತೂರು ತುರುತ್ತಿಯ ಶೋಬಿನ್ ರಾಜ್ (19) ರವಿವಾರ ಮೃತ ಪಟ್ಟಿದ್ದಾರೆ. ಕಿನಾವೂರಿನ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು.

ಉಡುಪಿ: ಅಕ್ರಮ ಗಾಂಜಾ ಸಾಗಾಟ ; ಇಬ್ಬರು ಆರೋಪಿಗಳ ಬಂಧನ – vishwanews24

ಇವರು ರತೀಶ್, ಬಿಜು, ಶೋಬಿನ್ ರಾಜ್ ಕೋಜಿಕ್ಕೋಡ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಆಗಿ ಕೆಲಸ ಮಾಡುತ್ತಿದ್ದರು.

ಕಳೆದ ಸೋಮವಾರ ರಾತ್ರಿ ಘಟನೆ ನಡೆದಿತ್ತು. ಸ್ಫೋಟದಲ್ಲಿ 154 ಮಂದಿ ಗಾಯ ಗೊಂಡಿದ್ದರು. ಈ ಪೈಕಿ 8 ಮಂದಿ ಗಂಭೀರ ಸುಟ್ಟ ಗಾಯ ಗೊಂಡಿದ್ದರು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಈಗಲೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ: ಅಕ್ರಮ ಗಾಂಜಾ ಸಾಗಾಟ ; ಇಬ್ಬರು ಆರೋಪಿಗಳ ಬಂಧನ – vishwanews24

Leave a Reply