ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ ಭಾನುವಾರ ಸಂಜೆ ಪ್ರವಾಸಕ್ಕೆ ಬಂದಿದ್ದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.
ಮೃತಪಟ್ಟ ವಿದ್ಯಾರ್ಥಿಗಳನ್ನು ಕೊಟ್ಟಾಯಂ ಜಿಲ್ಲೆಯ ಚಂಗನಾಶೇರಿಯ ನಿವಾಸಿಗಳಾದ ಅಂಕಿತ್ (20) ಮತ್ತು ಅಪ್ಪು ಟಿ. ಅಬ್ರಹಾಂ (20) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ ಸುಮಾರು 6:30ರ ಸುಮಾರಿಗೆ ಈ ಘಟನೆ ನಡೆದಿದೆ. ಒಟ್ಟು ಆರು ಮಂದಿ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕಾಗಿ ಕಡಲತೀರಕ್ಕೆ ಆಗಮಿಸಿದ್ದು, ಅವರಲ್ಲಿ ನಾಲ್ವರು ಸಮುದ್ರಕ್ಕಿಳಿದಿದ್ದರು.
ವಿದ್ಯಾರ್ಥಿಗಳು ಬೇಕಲ ಕೋಟೆಯನ್ನು ವೀಕ್ಷಿಸಲು ಬಂದಿದ್ದರು. ಘಟನೆಯ ನಂತರ ನಾಪತ್ತೆಯಾದ ವಿದ್ಯಾರ್ಥಿಗಳಿಗಾಗಿ ತಕ್ಷಣವೇ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ತಡರಾತ್ರಿಯವರೆಗೂ ಇಬ್ಬರು ವಿದ್ಯಾರ್ಥಿಗಳ ಸುಳಿವು ಪತ್ತೆಯಾಗಿರಲಿಲ್ಲ.
ಸಮುದ್ರಪಾಲಾದ ವಿದ್ಯಾರ್ಥಿಗಳಿಗಾಗಿ ಕರಾವಳಿ ಕಾವಲು ಪಡೆ, ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ ಹಾಗೂ ಸ್ಥಳೀಯ ನಿವಾಸಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…