Featured

ಕಾಸರಗೋಡು: ವಿದ್ಯುತ್ ಶಾಕ್ ; ಯುವಕ ಮೃತ್ಯು – vishwanews24

ಕಾಸರಗೋಡು: ವಿದ್ಯುತ್ ಶಾಕ್  ;  ಯುವಕ ಮೃತ್ಯು

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಮಂಜೇಶ್ವರ ಹೊಸಬೆಟ್ಟುವಿನ ನಿವಾಸಿ ಯಶವಂತ (21) ಮೃತ ದುರ್ದೈವಿ.

ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದಿದ್ದುದರಿಂದ ಸಹೋದರಿ ಟೆರೇಸ್ ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು ಕಂಡುಬಂದಿದೆ.

ಬಳಿಕ ಸ್ಥಳೀಯ ವಾಸಿಗಳು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಯುವಕ ಯಶವಂತ ಅವರು ಮೃತ ಪಟ್ಟಿದ್ದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿಯ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಯಶವಂತ ಉಪ್ಪಳ ಶಾಲಾ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಎರಡು ವರ್ಷಗಳಿಂದ ಉದ್ಯೋಗ ಮಾಡುತ್ತಿದ್ದು, ಸಂಜೆ ಕೆಲಸಕ್ಕೆ ತೆರಳಲು ಸಿದ್ದತೆ ನಡೆಸುತ್ತಿದ್ದ. ಈ ನಡುವೆ ಟೆರೇಸ್ ನ ಮೇಲೆ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

23 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

23 hours ago