Featured

ಕಾಸರಗೋಡು: ವಿದ್ಯುತ್ ಶಾಕ್ ; ಯುವಕ ಮೃತ್ಯು – vishwanews24

ಕಾಸರಗೋಡು: ವಿದ್ಯುತ್ ಶಾಕ್  ;  ಯುವಕ ಮೃತ್ಯು

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಮಂಜೇಶ್ವರ ಹೊಸಬೆಟ್ಟುವಿನ ನಿವಾಸಿ ಯಶವಂತ (21) ಮೃತ ದುರ್ದೈವಿ.

ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದಿದ್ದುದರಿಂದ ಸಹೋದರಿ ಟೆರೇಸ್ ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು ಕಂಡುಬಂದಿದೆ.

ಬಳಿಕ ಸ್ಥಳೀಯ ವಾಸಿಗಳು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಯುವಕ ಯಶವಂತ ಅವರು ಮೃತ ಪಟ್ಟಿದ್ದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿಯ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಯಶವಂತ ಉಪ್ಪಳ ಶಾಲಾ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಎರಡು ವರ್ಷಗಳಿಂದ ಉದ್ಯೋಗ ಮಾಡುತ್ತಿದ್ದು, ಸಂಜೆ ಕೆಲಸಕ್ಕೆ ತೆರಳಲು ಸಿದ್ದತೆ ನಡೆಸುತ್ತಿದ್ದ. ಈ ನಡುವೆ ಟೆರೇಸ್ ನ ಮೇಲೆ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago