ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ಸೋಮವಾರ ಸಂಜೆ ನಡೆದಿದೆ.
ಮಂಜೇಶ್ವರ ಹೊಸಬೆಟ್ಟುವಿನ ನಿವಾಸಿ ಯಶವಂತ (21) ಮೃತ ದುರ್ದೈವಿ.
ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದಿದ್ದುದರಿಂದ ಸಹೋದರಿ ಟೆರೇಸ್ ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು ಕಂಡುಬಂದಿದೆ.
ಬಳಿಕ ಸ್ಥಳೀಯ ವಾಸಿಗಳು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಯುವಕ ಯಶವಂತ ಅವರು ಮೃತ ಪಟ್ಟಿದ್ದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿಯ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಯಶವಂತ ಉಪ್ಪಳ ಶಾಲಾ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಎರಡು ವರ್ಷಗಳಿಂದ ಉದ್ಯೋಗ ಮಾಡುತ್ತಿದ್ದು, ಸಂಜೆ ಕೆಲಸಕ್ಕೆ ತೆರಳಲು ಸಿದ್ದತೆ ನಡೆಸುತ್ತಿದ್ದ. ಈ ನಡುವೆ ಟೆರೇಸ್ ನ ಮೇಲೆ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…