Featured

ಕಿಚ್ಚ ಸುದೀಪ್ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿ ನೇಮಕ : ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ – Vishwanews24

ಕಿಚ್ಚ ಸುದೀಪ್ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿ ನೇಮಕ : ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ

ಬೆಂಗಳೂರು: ಈಗಾಗಲೇ ಸಾಕಷ್ಟು ಸಮಾಜಸೇವೆ ಮಾಡಿರುವ ಕಿಚ್ಚ ಸುದೀಪ್ ಅವರನ್ನು ಕರ್ನಾಟಕ ಸರಕಾರವು ‘ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ’ಯನ್ನಾಗಿ ನೇಮಕ ಮಾಡಿದೆ. ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರವನ್ನು ಇಲಾಖೆ ಸಚಿವ ಪ್ರಭು ಚೌಹಾಣ್, ಇಂದು ಬೆಂಗಳೂರಿನ ಸುದೀಪ್ ಅವರ ನಿವಾಸದಲ್ಲಿ ರಾಯಭಾರಿ‌ ನೇಮಕಾತಿ ಪತ್ರ ನೀಡಿ ಸನ್ಮಾನಿಸಿದರು.

ನೇಮಕಾತಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಸುದೀಪ್, ಇದೇ ವೇಳೆ 31 ಗೋವುಗಳನ್ನು ದತ್ತು ಪಡೆವುದಾಗಿ ಅವರು ತಿಳಿಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಿಂದ ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ ಮಾಡಿರುವುದಾಗಿ ಸುದೀಪ್ ತಿಳಿಸಿದ್ದಾರೆ. ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ಅವರು ದತ್ತು ಪಡೆಯಲಿದ್ದಾರೆ.

ಇದನ್ನೂ ಓದಿ: 

ಸುದೀಪ್ ಅವರು ಸರಕಾರದ ಕಾರ್ಯಕ್ರಮಗಳಿಗೆ ರಾಯಭಾರಿ ಆಗುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಅವರು ಹಲವಾರು ಕಾರ್ಯಕ್ರಮಗಳ ಜೊತೆ ಕೈ ಜೋಡಿಸಿದ್ದಾರೆ. ಅಲ್ಲದೇ, ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿಯೂ ಅವರು ಸಹಕಾರಿ ಆಗಿದ್ದಾರೆ. ಈ ಸಲ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ಆಗುವ ಮೂಲಕ ಪುಣ್ಯಕೋಟಿ ಉಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

6 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago