ಬೆಂಗಳೂರು: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಸ್ಯಾಂಡಲ್ವುಡ್ ನಟ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತಿರುವ ವಿಷಯವಾಗಿದೆ. ಆದರೆ ಈ ನಟಿ ಸಿನಿಮಾಕ್ಕಾಗಿ ಕನ್ನಡವನ್ನು ಕಲಿತು ಸುದ್ದಿಯಾಗಿದ್ದಾರೆ.
ಕಿಚ್ಚ ಸುದೀಪ್ ನಟನೆಯ ಬಹುನೀರಿಕ್ಷಿತ ಸಿನಿಮಾ ವಿಕ್ರಾಂತ್ ರೋಣಾಗಾಗಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದಾರೆ. ಚಿತ್ರದಲ್ಲಿ ಜಾಕ್ವೆಲಿನ್ ಒಂದು ಹಾಡಿಗೆ ನೃತ್ಯವನ್ನು ಮಾತ್ರ ಮಾಡುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಇವರು ಕೆಲವು ದೃಶ್ಯಗಳಲ್ಲಿಯೂ ಕಾಣಿಸಿಕೊಂಡಿದ್ದಾರಂತೆ. ಅದಕ್ಕಾಗಿ ಅವರು ಕನ್ನಡವನ್ನು ಕಲಿತು ನಟಿಸಿದ್ದಾರೆ ಎಂಬ ಮಾಹಿತಿ ವಿಕ್ರಾಂತ್ ರೋಣ ಸೆಟ್ನಿಂದ ಸಿಕ್ಕಿದೆ.
ವಿಕ್ರಾಂತ್ ರೋಣ ಭಾರತೀಯ ಕಥೆಯನ್ನು ವಿಶ್ವಮಟ್ಟದಲ್ಲಿ ಹೇಳುವಂತಹ ಪ್ರಯತ್ನವಾಗಿದೆ. ನಾನು ಈ ಸಿನಿಮಾ ಭಾಗವಾಗಿದ್ದು ಖುಷಿಯ ವಿಚಾರವಾಗಿದೆ. ಸಿನಿಮಾದಲ್ಲಿ ನಾನು ಇರುವ ದೃಶ್ಯಗಳು ಮತ್ತು ಹಾಡು ಅದ್ಭುತವಾಗಿ ಮೂಡಿಬಂದಿದೆ ಎಂದು ಜಾಕ್ವೆಲಿನ್ ಫರ್ನಾಂಡಿಸ್ ಹೇಳಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ನಮ್ಮ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ಬಹಳ ವಿಶೇಷ ಎಂದು ನಮಗೆ ಅನಿಸುತ್ತದೆ. ಈ ಹಾಡು ಮತ್ತು ಅವರು ಕಾಣಿಸಿಕೊಂಡಿರುವ ಅಷ್ಟೂ ದೃಶ್ಯಗಳು ನೋಡುಗರಿಗೆ ವಿಶೇಷ ಅನುಭವವನ್ನು ನೀಡುತ್ತದೆ. ಇದಕ್ಕಾಗಿ ಬೆಂಗಳೂರಿನ ಕಂಠೀರವ ಸೆಟ್ನಲ್ಲಿ ಆರು ದಿನಗಳ ಕಾಲ ವಿಭಿನ್ನವಾದ ಸೆಟ್ ಹಾಕಿ ಚಿತ್ರೀಕರಿಸಿದ್ದೇವೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಹೇಳಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಆರು ದಿನಗಳ ಕಾಲ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಕನ್ನಡ ಡೈಲಾಗ್ಗಳನ್ನು ಪ್ರಾಕ್ಟೀಸ್ ಮಾಡಿಕೊಂಡು ಬಂದು ಹೇಳಿದ್ದಾರೆ. ಅವರು ಇರುವ ದೃಶ್ಯಗಳಿಗೆ ಅವರಿಂದಲೇ ಡಬ್ಬಿಂಗ್ ಮಾಡಿಸಬೇಕು ಎನ್ನುವ ಪ್ಲ್ಯಾನ್ ಇದೆ ಎಂದು ಅನೂಪ್ ಭಂಡಾರಿ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…