ಕಿತ್ತಾಡಿಕೊಂಡು ಮೈತ್ರಿ ಬಿದ್ದರೆ ಆಗ ನಾವು ಸರ್ಕಾರ ರಚನೆ ಮಾಡುತ್ತೇವೆ ; ನಾವಾಗಿಯೇ ಸರ್ಕಾರ ಬೀಳಿಸುವುದಿಲ್ಲ : ಬಿ.ಎಸ್. ಯಡಿಯೂರಪ್ಪ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಮೈತ್ರಿ ಸರ್ಕಾರದವರೇ ಕಿತ್ತಾಡಿಕೊಂಡು ಸರ್ಕಾರ ಬಿದ್ದರೆ ಆಗ ನಾವು ಸರ್ಕಾರ ರಚನೆ ಮಾಡುತ್ತೇವೆ. ನಾವಾಗಿಯೇ ಸರ್ಕಾರ ಬೀಳಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಮೈತ್ರಿ ಸರ್ಕಾರದಲ್ಲಿ ಅವರವರೇ ಕಿತ್ತಾಟ ನಡೆಸುತ್ತಿದ್ದಾರೆ. ಯಾವಾಗ ಬೇಕಾದರೂ ಮೈತ್ರಿ ಸರ್ಕಾರ ಬೀಳಬಹುದು. ಸರ್ಕಾರ ಬಿದ್ದರೆ ಮಾತ್ರ ಬಿಜೆಪಿ ಸರ್ಕಾರ ರಚನೆಗೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಜಿಂದಾಲ್ ಕಂಪನಿಗೆ ಸರ್ಕಾರದಿಂದ ಭೂಮಿ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರದಿಂದ ಭೂಮಿ ನೀಡುವ ಬಗ್ಗೆ ನಮ್ಮ ವಿರೋಧವಿದೆ. ಜೂನ್ 5 ರಂದು ಕೋರ್ ಕಮಿಟಿ ಸಭೆಯನ್ನು ಕರೆದಿದ್ದು, ಅಲ್ಲಿ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡುತ್ತೇವೆ ಎಂದರು.