ಬೆಂಗಳೂರು : ಮೈತ್ರಿ ಸರ್ಕಾರದವರೇ ಕಿತ್ತಾಡಿಕೊಂಡು ಸರ್ಕಾರ ಬಿದ್ದರೆ ಆಗ ನಾವು ಸರ್ಕಾರ ರಚನೆ ಮಾಡುತ್ತೇವೆ. ನಾವಾಗಿಯೇ ಸರ್ಕಾರ ಬೀಳಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಮೈತ್ರಿ ಸರ್ಕಾರದಲ್ಲಿ ಅವರವರೇ ಕಿತ್ತಾಟ ನಡೆಸುತ್ತಿದ್ದಾರೆ. ಯಾವಾಗ ಬೇಕಾದರೂ ಮೈತ್ರಿ ಸರ್ಕಾರ ಬೀಳಬಹುದು. ಸರ್ಕಾರ ಬಿದ್ದರೆ ಮಾತ್ರ ಬಿಜೆಪಿ ಸರ್ಕಾರ ರಚನೆಗೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಜಿಂದಾಲ್ ಕಂಪನಿಗೆ ಸರ್ಕಾರದಿಂದ ಭೂಮಿ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರದಿಂದ ಭೂಮಿ ನೀಡುವ ಬಗ್ಗೆ ನಮ್ಮ ವಿರೋಧವಿದೆ. ಜೂನ್ 5 ರಂದು ಕೋರ್ ಕಮಿಟಿ ಸಭೆಯನ್ನು ಕರೆದಿದ್ದು, ಅಲ್ಲಿ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡುತ್ತೇವೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…