Featured

ಕಿತ್ತೂರು ಉತ್ಸವ ಮಾಡುವ ಭಾಗ್ಯ ನನ್ನ ಪಾಲಿಗೆ ಬಂದಿದೆ : ಮುಖ್ಯಮಂತ್ರಿ ಬೊಮ್ಮಾಯಿ – Vishwanews24

ಕಿತ್ತೂರು ಉತ್ಸವ ಮಾಡುವ ಭಾಗ್ಯ ನನ್ನ ಪಾಲಿಗೆ ಬಂದಿದೆ : ಮುಖ್ಯಮಂತ್ರಿ ಬೊಮ್ಮಾಯಿ – Vishwanews24

ಬರುವ ದಿನಗಳಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಎಲ್ಲ ಸೂತ್ರಗಳನ್ನು ಬಿಜೆಪಿ ಸರ್ಕಾರ ಈಡೇರಿಸುತ್ತದೆ..

ಹುಬ್ಬಳ್ಳಿ: ರಾಣಿ ಚನ್ನಮ್ಮಳ ನಗರದಲ್ಲಿ ಮೂರ್ತಿ ಮಾಡಬೇಕಾದರೆ ಅದು ದೊಡ್ಡ ಹೋರಾಟವಾಗಿತು. ನಮ್ಮ ತಂದೆಯವರು ಉಸ್ತುವಾರಿ ಸಚಿವರಿದ್ದಾಗ ಎರಡು ವರ್ಷದ ಸುದೀರ್ಘ ಹೋರಾಟದ ಫಲವಾಗಿ ಈ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಈಗ ಕಿತ್ತೂರು ಉತ್ಸವ ಮಾಡುವ ಭಾಗ್ಯ ನನ್ನ ಪಾಲಿಗೆ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಶನಿವಾರ ಕಿತ್ತೂರ ರಾಣಿ ಚನ್ನಮ್ಮಳ ಜಯಂತಿ ಅಂಗವಾಗಿ ಇಲ್ಲಿಯ ಚನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದ ಅವರು, ಬ್ರಿಟೀಷರ ವಿರುದ್ಧ ರಣಕಹಳೆ ಮೊಳಗಿಸಿದ ರಾಣಿ ಚನ್ನಮ್ಮ ಮೂರ್ತಿಯನ್ನು ನಗರದಲ್ಲಿ ಸ್ಥಾಪನೆ ಮಾಡಲು ಸಾಕಷ್ಟು ಹೋರಾಟಗಳು ನಡೆದವು. ಆದರೆ ಅದು ಕೆಲ ವರ್ಷಗಳಲ್ಲೇ ಈಡೇರಿತು. ಇದೀಗ ವೀರ ವನಿತೆಯ ಉತ್ಸವ ಮಾಡುವ ಭಾಗ್ಯ ನನಗೆ ದೊರೆತಿರುವುದು ಪುಣ್ಯದ ಕಾರ್ಯ ಎಂದರು.

2011ರಲ್ಲಿ ನಾನು ಉಸ್ತುವಾರಿ ಸಚಿವನಿದ್ದಾಗ ಕಿತ್ತೂರ ಪ್ರಾಧಿಕಾರ ಮಾಡಿ ಅಂದು ಎಂಟು ಕೋಟಿ ರೂ. ಬಿಡುಗಡೆಗೊಳಿಸಿ ಆ ಕೆಲಸ ಪ್ರಾರಂಭಿಸಲಾಗಿತ್ತು. ಈ ವರ್ಷ 50 ಕೋಟಿ ಕ್ರಿಯಾಯೋಜನೆಗೆ ಅನುಮೋದನೆ ಕೊಡಲಾಗಿದೆ. ಹಣವನ್ನು ಸಹ ಬಿಡುಗಡೆ ಮಾಡುತ್ತಿದ್ದೇವೆ. ಬರುವ ದಿನಗಳಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಎಲ್ಲ ಸೂತ್ರಗಳನ್ನು ಬಿಜೆಪಿ ಸರ್ಕಾರ ಈಡೇರಿಸುತ್ತದೆ ಎಂದು ಹೇಳಿದರು.

ಬೃಹತ್ ಕೈಗಾರಿಕೆ ಸಚಿವ ಮುರಗೇಶ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ರಾಜುಗೌಡ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಇದ್ದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

8 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

10 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

11 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

11 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

11 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

11 hours ago