ಹುಬ್ಬಳ್ಳಿ: ರಾಣಿ ಚನ್ನಮ್ಮಳ ನಗರದಲ್ಲಿ ಮೂರ್ತಿ ಮಾಡಬೇಕಾದರೆ ಅದು ದೊಡ್ಡ ಹೋರಾಟವಾಗಿತು. ನಮ್ಮ ತಂದೆಯವರು ಉಸ್ತುವಾರಿ ಸಚಿವರಿದ್ದಾಗ ಎರಡು ವರ್ಷದ ಸುದೀರ್ಘ ಹೋರಾಟದ ಫಲವಾಗಿ ಈ ವೃತ್ತದಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಈಗ ಕಿತ್ತೂರು ಉತ್ಸವ ಮಾಡುವ ಭಾಗ್ಯ ನನ್ನ ಪಾಲಿಗೆ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಶನಿವಾರ ಕಿತ್ತೂರ ರಾಣಿ ಚನ್ನಮ್ಮಳ ಜಯಂತಿ ಅಂಗವಾಗಿ ಇಲ್ಲಿಯ ಚನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದ ಅವರು, ಬ್ರಿಟೀಷರ ವಿರುದ್ಧ ರಣಕಹಳೆ ಮೊಳಗಿಸಿದ ರಾಣಿ ಚನ್ನಮ್ಮ ಮೂರ್ತಿಯನ್ನು ನಗರದಲ್ಲಿ ಸ್ಥಾಪನೆ ಮಾಡಲು ಸಾಕಷ್ಟು ಹೋರಾಟಗಳು ನಡೆದವು. ಆದರೆ ಅದು ಕೆಲ ವರ್ಷಗಳಲ್ಲೇ ಈಡೇರಿತು. ಇದೀಗ ವೀರ ವನಿತೆಯ ಉತ್ಸವ ಮಾಡುವ ಭಾಗ್ಯ ನನಗೆ ದೊರೆತಿರುವುದು ಪುಣ್ಯದ ಕಾರ್ಯ ಎಂದರು.
2011ರಲ್ಲಿ ನಾನು ಉಸ್ತುವಾರಿ ಸಚಿವನಿದ್ದಾಗ ಕಿತ್ತೂರ ಪ್ರಾಧಿಕಾರ ಮಾಡಿ ಅಂದು ಎಂಟು ಕೋಟಿ ರೂ. ಬಿಡುಗಡೆಗೊಳಿಸಿ ಆ ಕೆಲಸ ಪ್ರಾರಂಭಿಸಲಾಗಿತ್ತು. ಈ ವರ್ಷ 50 ಕೋಟಿ ಕ್ರಿಯಾಯೋಜನೆಗೆ ಅನುಮೋದನೆ ಕೊಡಲಾಗಿದೆ. ಹಣವನ್ನು ಸಹ ಬಿಡುಗಡೆ ಮಾಡುತ್ತಿದ್ದೇವೆ. ಬರುವ ದಿನಗಳಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಎಲ್ಲ ಸೂತ್ರಗಳನ್ನು ಬಿಜೆಪಿ ಸರ್ಕಾರ ಈಡೇರಿಸುತ್ತದೆ ಎಂದು ಹೇಳಿದರು.
ಬೃಹತ್ ಕೈಗಾರಿಕೆ ಸಚಿವ ಮುರಗೇಶ ನಿರಾಣಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ರಾಜುಗೌಡ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಇದ್ದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…