ಕಿನ್ನಿಗೋಳಿ : ಬೈಕ್ ಸವಾರನೋರ್ವ ಪೆಟ್ರೋಲ್ ಬಂಕ್ ಬಳಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕೋಲ್ನಾಡು ಸಸಿತೋಟ ನಿವಾಸಿ ಶರತ್ ಶೆಟ್ಟಿ (49) ಎಂದು ಗುರುತಿಸಲಾಗಿದೆ.
ಮೃತ ಶರತ್ ಶೆಟ್ಟಿ ಹಳೆಯಂಗಡಿಯ ಸಂಸ್ಥೆಯೊಂದರಲ್ಲಿ ಚಾಲಕನಾಗಿ ದುಡಿಯುತ್ತಿದ್ದು ಕೆಲಸ ಮುಗಿಸಿ ವಾಪಸ್ ಬರುವ ವೇಳೆ ಪಕ್ಷಿಕೆರೆ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ವಿರುದ್ಧ ದಿಕ್ಕಿನಿಂದ ಬಂದ ಆಟೋಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಶರತ್ ಶೆಟ್ಟಿಯವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ತೀರ್ಮಾನಗಳಲ್ಲಿ ಎಚ್ಚರ 🌐 ನೋಡಿ ಇಂದಿನ ದಿನ ಭವಿಷ್ಯ -Vishwanews24
ಅಪಘಾತದಿಂದ ಆಟೋ ಹಾಗೂ ಬೈಕ್ ಜಖಂಗೊಂಡಿದೆ. ಮೃತ ಶರತ್ ಕೊಲ್ನಾಡು ಸಸಿತೋಟ ನಿವಾಸಿಯಾಗಿದ್ದು, ಪಕ್ಷಿಕೆರೆಯಲ್ಲಿ ಪ್ಲಾಟ್ನಲ್ಲಿ ವಾಸವಿದ್ದರು, ಈ ಹಿಂದೆ ಮುಂಬೈನಲ್ಲಿ ವಾಸ್ತವ್ಯವಿದ್ದು ಇತ್ತೀಚೆಗಷ್ಟೇ ಊರಿನಲ್ಲಿ ನೆಲೆಸಿದ್ದರು.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಈ ಬಗ್ಗೆ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…