Featured

ಕಿನ್ನಿಗೋಳಿ : ಪಕ್ಷಿಕೆರೆ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಸಿದ ತಮಿಳು ಚಿತ್ರನಟ ವಿಶಾಲ್‌ – vishwanews24

ಕಿನ್ನಿಗೋಳಿ : ಪಕ್ಷಿಕೆರೆ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಸಿದ ತಮಿಳು ಚಿತ್ರನಟ ವಿಶಾಲ್‌

ಕಿನ್ನಿಗೋಳಿ: ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ತಮಿಳು ಚಿತ್ರನಟ ವಿಶಾಲ್‌ ಅವರು ಬುಧವಾರ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರ ಆರೋಗ್ಯ ಸುಧಾರಿಸಲಿದೆ ಎಂಬ ಅಭಯ ವನ್ನು ದೈವ ನೀಡಿದೆ. ವಿಶಾಲ್‌ ಅವರು ಮುಂದಿನ ವರ್ಷ ಬಂದು ತುಲಾಭಾರ ಸೇವೆ ಸಲ್ಲಿಸುವುದಾಗಿ ಹರಕೆ ಹೊತ್ತಿದ್ದಾರೆ.

ಕಳೆದ ಜನವರಿಯಲ್ಲಿ ಚೆನ್ನೈಯಲ್ಲಿ ನಡೆದ ಮದಗಜ ರಾಜ ಸಿನೆಮಾದ ಪತ್ರಿಕಾಗೋಷ್ಠಿಯಲ್ಲಿ ಮೈಕ್‌ ಕೈಯಲ್ಲಿ ಹಿಡಿಯಲಾಗದಷ್ಟು ಸೋತುಹೋಗಿದ್ದರು. ಮಾತನಾಡಲೂ ಅಗುತ್ತಿರಲಿಲ್ಲ. ವೈರಲ್‌ ಫಿವರ್‌ನಿಂದ ಹೀಗಾಗಿದೆ ಎಂದು ಹೇಳಿದ್ದರೂ ಅವರ ಆರೋಗ್ಯ ಹದಗೆಟ್ಟ ಬಗ್ಗೆ ವರದಿಗಳಿದ್ದವು.

ಈ ನಡುವೆ ಮಂಗಳವಾರ ಅವರು ಕೊಲ್ಲೂರು ಮತ್ತು ಉಡುಪಿ ದೇಗುಲಕ್ಕೆ ಭೇಟಿ ನೀಡಿದ್ದರು. ಇದರ ನಡುವೆ ಅವರು ಕಾರಣಿಕ ದೈವವೆಂದೇ ಹೆಸರಾದ ಪಕ್ಷಿಕೆರೆ ಹರಿಪಾದೆಯ ಜಾರಂದಾಯ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು ಎಂದು ಕ್ಷೇತ್ರದ ವ್ಯವಸ್ಥಾಪಕ ಅಶ್ವಿ‌ನ್‌ ಶೇಖ್‌ ತಿಳಿಸಿದ್ದಾರೆ.

ಪ್ರಾರ್ಥನೆ ಸಲ್ಲಿಸಿದ ವಿಶಾಲ್‌

ವಿಶಾಲ್‌ ಮಂಗಳವಾರ ರಾತ್ರಿ ಸುಮಾರು 10.30ರ ಹೊತ್ತಿಗೆ ಕುಟುಂಬ ಸಮೇತ ದೈವಸ್ಥಾನಕ್ಕೆ ಆಗಮಿಸಿದರು. ಅಷ್ಟು ಹೊತ್ತಿಗೆ ಕ್ಷೇತ್ರದಲ್ಲಿ ಗಗ್ಗರ ಸೇವೆಗೆ ಅಣಿಯಾಗುತ್ತಿತ್ತು. ಕೈಯಲ್ಲಿ ಮಲ್ಲಿಗೆ ಚೆಂಡು ಹಿಡಿದಿದ್ದ ವಿಶಾಲ್‌ ಅವರು ಭಕ್ತಿಯಿಂದ ಗಗ್ಗರ ಸೇವೆಯನ್ನು ವೀಕ್ಷಿಸಿದರು. ಬಳಿಕ ಅವರನ್ನು ಕೊಡಿಯಡಿಗೆ ಕರೆಯಲಾಯಿತು. ಈ ವೇಳೆ ಅವರು ತಮ್ಮ ಆರೋಗ್ಯ ವೃದ್ಧಿಗಾಗಿ ಅನುಗ್ರಹ ಕೋರಿ ಬಂದಿರುವುದಾಗಿ ಹೇಳಿ ಆಶೀರ್ವಾದ ಬಯಸಿದರು. ಈ ನಡುವೆ ದೈವ‌ ಜೀಟಿಗೆ ಮರ್ಯಾದೆಯೊಂದಿಗೆ ಅಭಯ ನೀಡಿತು.

ಇತ್ತ ಅರ್ಚಕರು, ಕ್ಷೇತ್ರದ ತುಲಾಭಾರ ಸೇವೆಯು ಭಾರಿ ಕಾರಣಿಕದ್ದಾಗಿದ್ದು, ನೀವು ಆರೋಗ್ಯವಂತರಾಗಿ ಬಂದು ಮುಂದಿನ ವರ್ಷ ತುಲಾಭಾರ ಸೇವೆ ಕೊಡಿಸಿ ಎಂದು ಸಲಹೆ ನೀಡಿದರು. ವಿಶಾಲ್‌ ಅವರು ಅದಕ್ಕೆ ಒಪ್ಪಿ ಮುಂದಿನ ವರ್ಷ ಬರುವುದಾಗಿ ಹೇಳಿದರು. ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಅವರು ನಿರ್ಗಮಿಸಿದರು. ವಿಶಾಲ್‌ ಬುಧವಾರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

3 hours ago