Featured

ಕಿನ್ನಿಗೋಳಿ : ಪಕ್ಷಿಕೆರೆ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಸಿದ ತಮಿಳು ಚಿತ್ರನಟ ವಿಶಾಲ್‌ – vishwanews24

ಕಿನ್ನಿಗೋಳಿ : ಪಕ್ಷಿಕೆರೆ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಸಿದ ತಮಿಳು ಚಿತ್ರನಟ ವಿಶಾಲ್‌

ಕಿನ್ನಿಗೋಳಿ: ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ತಮಿಳು ಚಿತ್ರನಟ ವಿಶಾಲ್‌ ಅವರು ಬುಧವಾರ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರ ಆರೋಗ್ಯ ಸುಧಾರಿಸಲಿದೆ ಎಂಬ ಅಭಯ ವನ್ನು ದೈವ ನೀಡಿದೆ. ವಿಶಾಲ್‌ ಅವರು ಮುಂದಿನ ವರ್ಷ ಬಂದು ತುಲಾಭಾರ ಸೇವೆ ಸಲ್ಲಿಸುವುದಾಗಿ ಹರಕೆ ಹೊತ್ತಿದ್ದಾರೆ.

ಕಳೆದ ಜನವರಿಯಲ್ಲಿ ಚೆನ್ನೈಯಲ್ಲಿ ನಡೆದ ಮದಗಜ ರಾಜ ಸಿನೆಮಾದ ಪತ್ರಿಕಾಗೋಷ್ಠಿಯಲ್ಲಿ ಮೈಕ್‌ ಕೈಯಲ್ಲಿ ಹಿಡಿಯಲಾಗದಷ್ಟು ಸೋತುಹೋಗಿದ್ದರು. ಮಾತನಾಡಲೂ ಅಗುತ್ತಿರಲಿಲ್ಲ. ವೈರಲ್‌ ಫಿವರ್‌ನಿಂದ ಹೀಗಾಗಿದೆ ಎಂದು ಹೇಳಿದ್ದರೂ ಅವರ ಆರೋಗ್ಯ ಹದಗೆಟ್ಟ ಬಗ್ಗೆ ವರದಿಗಳಿದ್ದವು.

ಈ ನಡುವೆ ಮಂಗಳವಾರ ಅವರು ಕೊಲ್ಲೂರು ಮತ್ತು ಉಡುಪಿ ದೇಗುಲಕ್ಕೆ ಭೇಟಿ ನೀಡಿದ್ದರು. ಇದರ ನಡುವೆ ಅವರು ಕಾರಣಿಕ ದೈವವೆಂದೇ ಹೆಸರಾದ ಪಕ್ಷಿಕೆರೆ ಹರಿಪಾದೆಯ ಜಾರಂದಾಯ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು ಎಂದು ಕ್ಷೇತ್ರದ ವ್ಯವಸ್ಥಾಪಕ ಅಶ್ವಿ‌ನ್‌ ಶೇಖ್‌ ತಿಳಿಸಿದ್ದಾರೆ.

ಪ್ರಾರ್ಥನೆ ಸಲ್ಲಿಸಿದ ವಿಶಾಲ್‌

ವಿಶಾಲ್‌ ಮಂಗಳವಾರ ರಾತ್ರಿ ಸುಮಾರು 10.30ರ ಹೊತ್ತಿಗೆ ಕುಟುಂಬ ಸಮೇತ ದೈವಸ್ಥಾನಕ್ಕೆ ಆಗಮಿಸಿದರು. ಅಷ್ಟು ಹೊತ್ತಿಗೆ ಕ್ಷೇತ್ರದಲ್ಲಿ ಗಗ್ಗರ ಸೇವೆಗೆ ಅಣಿಯಾಗುತ್ತಿತ್ತು. ಕೈಯಲ್ಲಿ ಮಲ್ಲಿಗೆ ಚೆಂಡು ಹಿಡಿದಿದ್ದ ವಿಶಾಲ್‌ ಅವರು ಭಕ್ತಿಯಿಂದ ಗಗ್ಗರ ಸೇವೆಯನ್ನು ವೀಕ್ಷಿಸಿದರು. ಬಳಿಕ ಅವರನ್ನು ಕೊಡಿಯಡಿಗೆ ಕರೆಯಲಾಯಿತು. ಈ ವೇಳೆ ಅವರು ತಮ್ಮ ಆರೋಗ್ಯ ವೃದ್ಧಿಗಾಗಿ ಅನುಗ್ರಹ ಕೋರಿ ಬಂದಿರುವುದಾಗಿ ಹೇಳಿ ಆಶೀರ್ವಾದ ಬಯಸಿದರು. ಈ ನಡುವೆ ದೈವ‌ ಜೀಟಿಗೆ ಮರ್ಯಾದೆಯೊಂದಿಗೆ ಅಭಯ ನೀಡಿತು.

ಇತ್ತ ಅರ್ಚಕರು, ಕ್ಷೇತ್ರದ ತುಲಾಭಾರ ಸೇವೆಯು ಭಾರಿ ಕಾರಣಿಕದ್ದಾಗಿದ್ದು, ನೀವು ಆರೋಗ್ಯವಂತರಾಗಿ ಬಂದು ಮುಂದಿನ ವರ್ಷ ತುಲಾಭಾರ ಸೇವೆ ಕೊಡಿಸಿ ಎಂದು ಸಲಹೆ ನೀಡಿದರು. ವಿಶಾಲ್‌ ಅವರು ಅದಕ್ಕೆ ಒಪ್ಪಿ ಮುಂದಿನ ವರ್ಷ ಬರುವುದಾಗಿ ಹೇಳಿದರು. ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಅವರು ನಿರ್ಗಮಿಸಿದರು. ವಿಶಾಲ್‌ ಬುಧವಾರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago