Featured

ಕಿನ್ನಿಗೋಳಿ, ಬಜಪೆ ಪ.ಪಂ ಚುನಾವಣೆ: ಬಿಜೆಪಿ ಗೆಲುವು ಮೋದಿ ಜನಪರ ಆಡಳಿತದ ಪರವಾಗಿ ಸಂದ ಜಯ : ಸಂಸದ ಕ್ಯಾ. ಚೌಟ – vishwanews24

ಕಿನ್ನಿಗೋಳಿ, ಬಜಪೆ ಪ.ಪಂ ಚುನಾವಣೆ: ಬಿಜೆಪಿ ಗೆಲುವು ಮೋದಿ ಜನಪರ ಆಡಳಿತದ ಪರವಾಗಿ ಸಂದ ಜಯ : ಸಂಸದ ಕ್ಯಾ. ಚೌಟ

ಮಂಗಳೂರು : ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್‌ಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದೊಂದಿಗೆ ಭರ್ಜರಿ ಗೆಲುವು ದಾಖಲಿಸಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಚಿಂತನೆ, ಜನಪರ ಕಾಳಜಿ ಹಾಗೂ ಹಿಂದುತ್ವದ ವಿಚಾರಧಾರೆಯ ಪರವಾಗಿ ಸಂದ ಜಯ. ಈ ಹಿನ್ನಲೆಯಲ್ಲಿ ಮತದಾರರಿಗೆ ನನ್ನ ವಿಶೇಷ ಧನ್ಯವಾದಗಳು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ಕುರಿತು ಹರ್ಷ ವ್ಯಕ್ತಪಡಿಸಿರುವ ಸಂಸದರು, “ಈ ಫಲಿತಾಂಶವು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಿಂದೂ ವಿರೋಧಿ ನೀತಿಗಳಿಗೆ ಜನತೆ ನೀಡಿದ ಸ್ಪಷ್ಟವಾದ ಉತ್ತರವಾಗಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಹತ್ತಿರದಿಂದ ಕಂಡ ಜನತೆ ಬಿಜೆಪಿಯ ಸಿದ್ಧಾಂತಕ್ಕೆ ಮನ್ನಣೆ ನೀಡಿದ್ದಾರೆ. ಆ ಮೂಲಕ ಸ್ಥಳೀಯ ಆಡಳಿತದಿಂದ ಹಿಡಿದು, ರಾಜ್ಯ – ರಾಷ್ಟ್ರ ಮಟ್ಟದಲ್ಲೂ ಬಿಜೆಪಿಗೆ ಅಭೂತಪೂರ್ವ ಜನಾದೇಶ ವ್ಯಕ್ತವಾಗುತ್ತಿರುವುದು ಪ್ರಧಾನಿ ಮೋದಿಯವರ ವಿಕಸಿತ ಭಾರತಕ್ಕೆ ಸಂಕಲ್ಪಕ್ಕೆ ಮತ್ತಷ್ಟು ಸ್ಫೂರ್ತಿ ತುಂಬಿದೆ ಎಂದು ಹೇಳಿದ್ದಾರೆ.

ಈ ಗೆಲುವಿನ ಹಿಂದೆ ಅಹರ್ನಿಶಿಯಾಗಿ ಶ್ರಮಿಸಿದ ಸಮಸ್ತ ಕಾರ್ಯಕರ್ತ ಬಂಧುಗಳಿಗೆ, ಮೂಲ್ಕಿ – ಮೂಡುಬಿದ್ರೆ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್, ಎಲ್ಲಾ ಪದಾಧಿಕಾರಿಗಳು ಹಾಗೂ ಪಾರ್ಟಿಯ ಎಲ್ಲಾ ಪ್ರಮುಖರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುವುದಾಗಿ ಕ್ಯಾ. ಚೌಟ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

20 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

23 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

23 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

23 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

23 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

24 hours ago