Featured

ಕಿನ್ನಿಗೋಳಿ, ಬಜಪೆ ಪ.ಪಂ ಚುನಾವಣೆ: ಬಿಜೆಪಿ ಗೆಲುವು ಮೋದಿ ಜನಪರ ಆಡಳಿತದ ಪರವಾಗಿ ಸಂದ ಜಯ : ಸಂಸದ ಕ್ಯಾ. ಚೌಟ – vishwanews24

ಕಿನ್ನಿಗೋಳಿ, ಬಜಪೆ ಪ.ಪಂ ಚುನಾವಣೆ: ಬಿಜೆಪಿ ಗೆಲುವು ಮೋದಿ ಜನಪರ ಆಡಳಿತದ ಪರವಾಗಿ ಸಂದ ಜಯ : ಸಂಸದ ಕ್ಯಾ. ಚೌಟ

ಮಂಗಳೂರು : ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್‌ಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದೊಂದಿಗೆ ಭರ್ಜರಿ ಗೆಲುವು ದಾಖಲಿಸಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಚಿಂತನೆ, ಜನಪರ ಕಾಳಜಿ ಹಾಗೂ ಹಿಂದುತ್ವದ ವಿಚಾರಧಾರೆಯ ಪರವಾಗಿ ಸಂದ ಜಯ. ಈ ಹಿನ್ನಲೆಯಲ್ಲಿ ಮತದಾರರಿಗೆ ನನ್ನ ವಿಶೇಷ ಧನ್ಯವಾದಗಳು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ಕುರಿತು ಹರ್ಷ ವ್ಯಕ್ತಪಡಿಸಿರುವ ಸಂಸದರು, “ಈ ಫಲಿತಾಂಶವು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಿಂದೂ ವಿರೋಧಿ ನೀತಿಗಳಿಗೆ ಜನತೆ ನೀಡಿದ ಸ್ಪಷ್ಟವಾದ ಉತ್ತರವಾಗಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಹತ್ತಿರದಿಂದ ಕಂಡ ಜನತೆ ಬಿಜೆಪಿಯ ಸಿದ್ಧಾಂತಕ್ಕೆ ಮನ್ನಣೆ ನೀಡಿದ್ದಾರೆ. ಆ ಮೂಲಕ ಸ್ಥಳೀಯ ಆಡಳಿತದಿಂದ ಹಿಡಿದು, ರಾಜ್ಯ – ರಾಷ್ಟ್ರ ಮಟ್ಟದಲ್ಲೂ ಬಿಜೆಪಿಗೆ ಅಭೂತಪೂರ್ವ ಜನಾದೇಶ ವ್ಯಕ್ತವಾಗುತ್ತಿರುವುದು ಪ್ರಧಾನಿ ಮೋದಿಯವರ ವಿಕಸಿತ ಭಾರತಕ್ಕೆ ಸಂಕಲ್ಪಕ್ಕೆ ಮತ್ತಷ್ಟು ಸ್ಫೂರ್ತಿ ತುಂಬಿದೆ ಎಂದು ಹೇಳಿದ್ದಾರೆ.

ಈ ಗೆಲುವಿನ ಹಿಂದೆ ಅಹರ್ನಿಶಿಯಾಗಿ ಶ್ರಮಿಸಿದ ಸಮಸ್ತ ಕಾರ್ಯಕರ್ತ ಬಂಧುಗಳಿಗೆ, ಮೂಲ್ಕಿ – ಮೂಡುಬಿದ್ರೆ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಂಡಲ ಅಧ್ಯಕ್ಷರಾದ ದಿನೇಶ್ ಪುತ್ರನ್, ಎಲ್ಲಾ ಪದಾಧಿಕಾರಿಗಳು ಹಾಗೂ ಪಾರ್ಟಿಯ ಎಲ್ಲಾ ಪ್ರಮುಖರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುವುದಾಗಿ ಕ್ಯಾ. ಚೌಟ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago