Featured

ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ : ರಾಷ್ಟ್ರ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ; ಉಡುಪಿಯ ಗಹನಾಗೆ ಪ್ರಥಮ ಸ್ಥಾನ -Vishwanews24

ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ : ರಾಷ್ಟ್ರ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ; ಉಡುಪಿಯ ಗಹನಾ ಮಾನಸಿಗೆ ಪ್ರಥಮ ಸ್ಥಾನ -Vishwanews24

ಉಡುಪಿ: ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ. ಬೆಂಗಳೂರಿನಲ್ಲಿ ಇಸ್ಕಾನ್‌ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಮೂಲದ ಬೆಂಗಳೂರು ನಿವಾಸಿ ಗಹನಾ ಮಾನಸಿ ತನಗಿಂತ 10 ವರ್ಷ ಹಿರಿಯ ವಯಸ್ಸಿನ ವಿದ್ಯಾರ್ಥಿಗಳನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

ಸ್ಪರ್ಧೆಯನ್ನು 6ರಿಂದ 14 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜಿಸ ಲಾಗಿತ್ತು. ವಿವಿಧ ರಾಜ್ಯಗಳ 370 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರಲ್ಲಿ ಗಹನಾ ಮಾನಸಿ (5 ವರ್ಷ 10 ತಿಂಗಳು) ಅತ್ಯಂತ ಕಿರಿಯ ವಯಸ್ಸಿನ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

ಸ್ಪರ್ಧೆಯಲ್ಲಿ ಭಗವದ್ಗೀತೆಯ 9ನೇ ಅಧ್ಯಾಯದ ಶ್ಲೋಕವೊಂದನ್ನು ನಿಗದಿ ಮಾಡಲಾಗಿತ್ತು. ಶ್ಲೋಕ ಪೂರ್ಣಗೊಳಿಸಲು ಸಮಯದ ಮಿತಿಯನ್ನು ಸಹ ನೀಡಲಾಗಿತ್ತು. ಗಹನಾ ನಿಗದಿತ ಸಮಯದೊಳಗೆ ಯಾವುದೇ ತಡವರಿಕೆ ಇಲ್ಲದೆ ಶ್ಲೋಕವನ್ನು ಪೂರ್ಣಗೊಳಿಸಿದ್ದು, ಆ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ :ಮಂಗಳೂರು : ಜೇಸಿಐ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ನಿಧಿ ಶೆಟ್ಟಿ ಪುಳಿಂಚ -Vishwanews24

ಗಹನಾ ಮಾನಸಿ ಬೆಳ್ಳಂಪಳ್ಳಿ ನಿವಾಸಿ ಶ್ವೇತಾ ಮತ್ತು ಮಧುರ್‌ರಾಜ್‌ ಶೆಟ್ಟಿಗಾರ್‌ ದಂಪತಿಯ ಪುತ್ರಿ. ಬೆಳ್ಳಂಪಳ್ಳಿಯ ಉದಯವಾಣಿ ಏಜೆಂಟ್‌ ಸಾವಿತ್ರಿ ಸೀತಾರಾಮ್‌ ಶೆಟ್ಟಿಗಾರ್‌ ಅವರ ಮೊಮ್ಮಗಳು. ಬಾಲಕಿಯ ತಂದೆ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಗಹನಾ ಬೆಂಗಳೂರಿನ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ಕಲಿಯುತ್ತಿದ್ದಾಳೆ. ಶೈಕ್ಷಣಿಕ ಸೇರಿದಂತೆ ಇತರ ಚಟುವಟಿಕೆಗಳಲ್ಲೂ ಮುಂದೆ ಇದ್ದಾಳೆ.

 

 

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

44 minutes ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

5 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

6 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

7 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

7 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

7 hours ago