Featured

ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ : ರಾಷ್ಟ್ರ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ; ಉಡುಪಿಯ ಗಹನಾಗೆ ಪ್ರಥಮ ಸ್ಥಾನ -Vishwanews24

ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ : ರಾಷ್ಟ್ರ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ; ಉಡುಪಿಯ ಗಹನಾ ಮಾನಸಿಗೆ ಪ್ರಥಮ ಸ್ಥಾನ -Vishwanews24

ಉಡುಪಿ: ಕಿರಿಯ ವಯಸ್ಸಿನಲ್ಲಿ ಹಿರಿಯ ಸಾಧನೆ. ಬೆಂಗಳೂರಿನಲ್ಲಿ ಇಸ್ಕಾನ್‌ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಮೂಲದ ಬೆಂಗಳೂರು ನಿವಾಸಿ ಗಹನಾ ಮಾನಸಿ ತನಗಿಂತ 10 ವರ್ಷ ಹಿರಿಯ ವಯಸ್ಸಿನ ವಿದ್ಯಾರ್ಥಿಗಳನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

ಸ್ಪರ್ಧೆಯನ್ನು 6ರಿಂದ 14 ವರ್ಷದೊಳಗಿನ ಮಕ್ಕಳಿಗಾಗಿ ಆಯೋಜಿಸ ಲಾಗಿತ್ತು. ವಿವಿಧ ರಾಜ್ಯಗಳ 370 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರಲ್ಲಿ ಗಹನಾ ಮಾನಸಿ (5 ವರ್ಷ 10 ತಿಂಗಳು) ಅತ್ಯಂತ ಕಿರಿಯ ವಯಸ್ಸಿನ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

ಸ್ಪರ್ಧೆಯಲ್ಲಿ ಭಗವದ್ಗೀತೆಯ 9ನೇ ಅಧ್ಯಾಯದ ಶ್ಲೋಕವೊಂದನ್ನು ನಿಗದಿ ಮಾಡಲಾಗಿತ್ತು. ಶ್ಲೋಕ ಪೂರ್ಣಗೊಳಿಸಲು ಸಮಯದ ಮಿತಿಯನ್ನು ಸಹ ನೀಡಲಾಗಿತ್ತು. ಗಹನಾ ನಿಗದಿತ ಸಮಯದೊಳಗೆ ಯಾವುದೇ ತಡವರಿಕೆ ಇಲ್ಲದೆ ಶ್ಲೋಕವನ್ನು ಪೂರ್ಣಗೊಳಿಸಿದ್ದು, ಆ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ :ಮಂಗಳೂರು : ಜೇಸಿಐ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ನಿಧಿ ಶೆಟ್ಟಿ ಪುಳಿಂಚ -Vishwanews24

ಗಹನಾ ಮಾನಸಿ ಬೆಳ್ಳಂಪಳ್ಳಿ ನಿವಾಸಿ ಶ್ವೇತಾ ಮತ್ತು ಮಧುರ್‌ರಾಜ್‌ ಶೆಟ್ಟಿಗಾರ್‌ ದಂಪತಿಯ ಪುತ್ರಿ. ಬೆಳ್ಳಂಪಳ್ಳಿಯ ಉದಯವಾಣಿ ಏಜೆಂಟ್‌ ಸಾವಿತ್ರಿ ಸೀತಾರಾಮ್‌ ಶೆಟ್ಟಿಗಾರ್‌ ಅವರ ಮೊಮ್ಮಗಳು. ಬಾಲಕಿಯ ತಂದೆ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಗಹನಾ ಬೆಂಗಳೂರಿನ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ಕಲಿಯುತ್ತಿದ್ದಾಳೆ. ಶೈಕ್ಷಣಿಕ ಸೇರಿದಂತೆ ಇತರ ಚಟುವಟಿಕೆಗಳಲ್ಲೂ ಮುಂದೆ ಇದ್ದಾಳೆ.

 

 

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

9 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

10 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

10 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

10 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

11 hours ago