ಬೆಂಗಳೂರು: ಕಿರುತೆರೆಯಲ್ಲಿ ಮನೆಮಾತಾಗಿರುವ ‘ಕಮಲಿ’ ಧಾರಾವಾಹಿಯ ನಿರ್ದೇಶಕನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.
ಕಮಲಿ ನಿರ್ಮಾಪಕ ರೋಹಿತ್ ಅವರಿಗೆ ನಿರ್ದೇಶಕ ಅರವಿಂದ್ ಕೌಶಿಕ್ ಎಂಬುವರು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಕಮಲಿ ಧಾರಾವಾಹಿಗೆ ನಿರ್ಮಾಪಕ ರೋಹಿತ್, 73 ಲಕ್ಷ ಬಂಡವಾಳ ಹೂಡಿಕೆ ಮಾಡಿಸಿದ್ದಾರಂತೆ. ಹೂಡಿಕೆಯ ನಂತರ ಲಾಭಾಂಶ ಹಾಗೂ ಬಂಡವಾಳ ವಾಪಸ್ ನೀಡಿಲ್ಲವೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೇ 28 , 2018 ರಂದು ಕಮಲಿ ಧಾರಾವಾಹಿ ಶುರುವಾಗಿತ್ತು. ಸುಮಾರು 287 ಸಂಚಿಕೆಗಳ ಕಾಲ ರೋಹಿತ್ರನ್ನು ನಿರ್ಮಾಪಕನೆಂದು ತೋರಿಸಲಾಗಿತ್ತು. ನಂತರ ಧಾರವಾಹಿಯ ಟೈಟಲ್ ಕಾರ್ಡ್ನಿಂದ ರೋಹಿತ್ ಹೆಸರನ್ನು ಧಾರಾವಾಹಿ ತಂಡ ತೆಗೆದಿದೆ. ಈ ಮಧ್ಯೆ ನಿರ್ದೇಶಕ ಕೌಶಿಕ್, ತನ್ನ ಪತ್ನಿ ಶಿಲ್ಪಾ ಹಾಗೂ ನವೀನ್ ಸಾಗರ್ ಹೆಸರಿನಲ್ಲಿ ಸತ್ವ ಮೀಡಿಯಾ ಎಂದು ಅಗ್ರಿಮೆಂಟ್ ಮಾಡಿಕೊಂಡು ಲಾಭ ಪಡೆದಿದ್ದಾರೆ. ಧಾರವಾಹಿಗೆ 73 ಲಕ್ಷ ರೂ. ಹಣ ಹೂಡಿಕೆ ಮಾಡಿದ ನನ್ನ ಗಮನಕ್ಕೆ ತರದೇ ವಂಚನೆ ಮಾಡಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ.
ಸದ್ಯ ಕಮಲಿ ಧಾರಾವಾಹಿ 500 ಸಂಚಿಕೆಗಳನ್ನು ಪೂರೈಸಿದೆ. ಅಸಲಿಗೆ ಧಾರಾವಾಹಿ ನಿರ್ಮಾಣಕ್ಕೆ ಲಕ್ಷಗಟ್ಟಲೇ ಹಣ ಹೂಡಿಕೆ ಮಾಡಿದ್ದು ನಾನು. ಆದರೆ, ಲಾಭಾಂಶ ಹಾಗೂ ಹೂಡಿಕೆ ಮಾಡಿದ ಹಣ ವಾಪಸ್ ನೀಡದೇ ವಂಚಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರಿಗೆ ರೋಹಿತ್ ದೂರು ದಾಖಲಿಸಿದ್ದಾರೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…