ಕಿರುತೆರೆಯಲ್ಲಿ ಮನೆಮಾತಾಗಿರುವ ಪ್ರಸಿದ್ಧ ‘ಕಮಲಿ’ ಧಾರಾವಾಹಿ ನಿರ್ದೇಶಕರ ವಿರುದ್ಧ ವಂಚನೆ ಆರೋಪ – Vishwanews24

ಬೆಂಗಳೂರು: ಕಿರುತೆರೆಯಲ್ಲಿ ಮನೆಮಾತಾಗಿರುವ ‘ಕಮಲಿ’ ಧಾರಾವಾಹಿಯ ನಿರ್ದೇಶಕನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.

ಕಮಲಿ ನಿರ್ಮಾಪಕ ರೋಹಿತ್ ಅವರಿಗೆ ನಿರ್ದೇಶಕ ಅರವಿಂದ್ ಕೌಶಿಕ್ ಎಂಬುವರು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಕಮಲಿ ಧಾರಾವಾಹಿಗೆ ನಿರ್ಮಾಪಕ ರೋಹಿತ್​, 73 ಲಕ್ಷ ಬಂಡವಾಳ ಹೂಡಿಕೆ ಮಾಡಿಸಿದ್ದಾರಂತೆ. ಹೂಡಿಕೆಯ ನಂತರ ಲಾಭಾಂಶ ಹಾಗೂ ಬಂಡವಾಳ ವಾಪಸ್ ನೀಡಿಲ್ಲವೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೇ 28 , 2018 ರಂದು ಕಮಲಿ ಧಾರಾವಾಹಿ ಶುರುವಾಗಿತ್ತು. ಸುಮಾರು 287 ಸಂಚಿಕೆಗಳ ಕಾಲ ರೋಹಿತ್​​ರನ್ನು ನಿರ್ಮಾಪಕನೆಂದು ತೋರಿಸಲಾಗಿತ್ತು. ನಂತರ ಧಾರವಾಹಿಯ ಟೈಟಲ್ ಕಾರ್ಡ್​ನಿಂದ ರೋಹಿತ್ ಹೆಸರನ್ನು ಧಾರಾವಾಹಿ ತಂಡ ತೆಗೆದಿದೆ. ಈ ಮಧ್ಯೆ ನಿರ್ದೇಶಕ ಕೌಶಿಕ್​, ತನ್ನ ಪತ್ನಿ ಶಿಲ್ಪಾ ಹಾಗೂ ನವೀನ್​ ಸಾಗರ್​ ಹೆಸರಿನಲ್ಲಿ ಸತ್ವ ಮೀಡಿಯಾ ಎಂದು ಅಗ್ರಿಮೆಂಟ್ ಮಾಡಿಕೊಂಡು ಲಾಭ ಪಡೆದಿದ್ದಾರೆ. ಧಾರವಾಹಿಗೆ 73 ಲಕ್ಷ ರೂ. ಹಣ ಹೂಡಿಕೆ ಮಾಡಿದ ನನ್ನ ಗಮನಕ್ಕೆ ತರದೇ ವಂಚನೆ ಮಾಡಿದ್ದಾರೆ ಎಂದು ರೋಹಿತ್​ ಆರೋಪಿಸಿದ್ದಾರೆ.

ಸದ್ಯ ಕಮಲಿ ಧಾರಾವಾಹಿ 500 ಸಂಚಿಕೆಗಳನ್ನು ಪೂರೈಸಿದೆ. ಅಸಲಿಗೆ ಧಾರಾವಾಹಿ ನಿರ್ಮಾಣಕ್ಕೆ ಲಕ್ಷಗಟ್ಟಲೇ ಹಣ ಹೂಡಿಕೆ ಮಾಡಿದ್ದು ನಾನು. ಆದರೆ, ಲಾಭಾಂಶ ಹಾಗೂ ಹೂಡಿಕೆ ಮಾಡಿದ ಹಣ ವಾಪಸ್ ನೀಡದೇ ವಂಚಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರಿಗೆ ರೋಹಿತ್​ ದೂರು ದಾಖಲಿಸಿದ್ದಾರೆ

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago