ಬೆಂಗಳೂರು: ಕಿರುತೆರೆಯಲ್ಲಿ ಮನೆಮಾತಾಗಿರುವ ‘ಕಮಲಿ’ ಧಾರಾವಾಹಿಯ ನಿರ್ದೇಶಕನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.
ಕಮಲಿ ನಿರ್ಮಾಪಕ ರೋಹಿತ್ ಅವರಿಗೆ ನಿರ್ದೇಶಕ ಅರವಿಂದ್ ಕೌಶಿಕ್ ಎಂಬುವರು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಕಮಲಿ ಧಾರಾವಾಹಿಗೆ ನಿರ್ಮಾಪಕ ರೋಹಿತ್, 73 ಲಕ್ಷ ಬಂಡವಾಳ ಹೂಡಿಕೆ ಮಾಡಿಸಿದ್ದಾರಂತೆ. ಹೂಡಿಕೆಯ ನಂತರ ಲಾಭಾಂಶ ಹಾಗೂ ಬಂಡವಾಳ ವಾಪಸ್ ನೀಡಿಲ್ಲವೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೇ 28 , 2018 ರಂದು ಕಮಲಿ ಧಾರಾವಾಹಿ ಶುರುವಾಗಿತ್ತು. ಸುಮಾರು 287 ಸಂಚಿಕೆಗಳ ಕಾಲ ರೋಹಿತ್ರನ್ನು ನಿರ್ಮಾಪಕನೆಂದು ತೋರಿಸಲಾಗಿತ್ತು. ನಂತರ ಧಾರವಾಹಿಯ ಟೈಟಲ್ ಕಾರ್ಡ್ನಿಂದ ರೋಹಿತ್ ಹೆಸರನ್ನು ಧಾರಾವಾಹಿ ತಂಡ ತೆಗೆದಿದೆ. ಈ ಮಧ್ಯೆ ನಿರ್ದೇಶಕ ಕೌಶಿಕ್, ತನ್ನ ಪತ್ನಿ ಶಿಲ್ಪಾ ಹಾಗೂ ನವೀನ್ ಸಾಗರ್ ಹೆಸರಿನಲ್ಲಿ ಸತ್ವ ಮೀಡಿಯಾ ಎಂದು ಅಗ್ರಿಮೆಂಟ್ ಮಾಡಿಕೊಂಡು ಲಾಭ ಪಡೆದಿದ್ದಾರೆ. ಧಾರವಾಹಿಗೆ 73 ಲಕ್ಷ ರೂ. ಹಣ ಹೂಡಿಕೆ ಮಾಡಿದ ನನ್ನ ಗಮನಕ್ಕೆ ತರದೇ ವಂಚನೆ ಮಾಡಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ.
ಸದ್ಯ ಕಮಲಿ ಧಾರಾವಾಹಿ 500 ಸಂಚಿಕೆಗಳನ್ನು ಪೂರೈಸಿದೆ. ಅಸಲಿಗೆ ಧಾರಾವಾಹಿ ನಿರ್ಮಾಣಕ್ಕೆ ಲಕ್ಷಗಟ್ಟಲೇ ಹಣ ಹೂಡಿಕೆ ಮಾಡಿದ್ದು ನಾನು. ಆದರೆ, ಲಾಭಾಂಶ ಹಾಗೂ ಹೂಡಿಕೆ ಮಾಡಿದ ಹಣ ವಾಪಸ್ ನೀಡದೇ ವಂಚಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರಿಗೆ ರೋಹಿತ್ ದೂರು ದಾಖಲಿಸಿದ್ದಾರೆ
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…