ಬೆಂಗಳೂರು: ಕಿರುತೆರೆಯಲ್ಲಿ ಮನೆಮಾತಾಗಿರುವ ‘ಕಮಲಿ’ ಧಾರಾವಾಹಿಯ ನಿರ್ದೇಶಕನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.
ಕಮಲಿ ನಿರ್ಮಾಪಕ ರೋಹಿತ್ ಅವರಿಗೆ ನಿರ್ದೇಶಕ ಅರವಿಂದ್ ಕೌಶಿಕ್ ಎಂಬುವರು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಕಮಲಿ ಧಾರಾವಾಹಿಗೆ ನಿರ್ಮಾಪಕ ರೋಹಿತ್, 73 ಲಕ್ಷ ಬಂಡವಾಳ ಹೂಡಿಕೆ ಮಾಡಿಸಿದ್ದಾರಂತೆ. ಹೂಡಿಕೆಯ ನಂತರ ಲಾಭಾಂಶ ಹಾಗೂ ಬಂಡವಾಳ ವಾಪಸ್ ನೀಡಿಲ್ಲವೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೇ 28 , 2018 ರಂದು ಕಮಲಿ ಧಾರಾವಾಹಿ ಶುರುವಾಗಿತ್ತು. ಸುಮಾರು 287 ಸಂಚಿಕೆಗಳ ಕಾಲ ರೋಹಿತ್ರನ್ನು ನಿರ್ಮಾಪಕನೆಂದು ತೋರಿಸಲಾಗಿತ್ತು. ನಂತರ ಧಾರವಾಹಿಯ ಟೈಟಲ್ ಕಾರ್ಡ್ನಿಂದ ರೋಹಿತ್ ಹೆಸರನ್ನು ಧಾರಾವಾಹಿ ತಂಡ ತೆಗೆದಿದೆ. ಈ ಮಧ್ಯೆ ನಿರ್ದೇಶಕ ಕೌಶಿಕ್, ತನ್ನ ಪತ್ನಿ ಶಿಲ್ಪಾ ಹಾಗೂ ನವೀನ್ ಸಾಗರ್ ಹೆಸರಿನಲ್ಲಿ ಸತ್ವ ಮೀಡಿಯಾ ಎಂದು ಅಗ್ರಿಮೆಂಟ್ ಮಾಡಿಕೊಂಡು ಲಾಭ ಪಡೆದಿದ್ದಾರೆ. ಧಾರವಾಹಿಗೆ 73 ಲಕ್ಷ ರೂ. ಹಣ ಹೂಡಿಕೆ ಮಾಡಿದ ನನ್ನ ಗಮನಕ್ಕೆ ತರದೇ ವಂಚನೆ ಮಾಡಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ.
ಸದ್ಯ ಕಮಲಿ ಧಾರಾವಾಹಿ 500 ಸಂಚಿಕೆಗಳನ್ನು ಪೂರೈಸಿದೆ. ಅಸಲಿಗೆ ಧಾರಾವಾಹಿ ನಿರ್ಮಾಣಕ್ಕೆ ಲಕ್ಷಗಟ್ಟಲೇ ಹಣ ಹೂಡಿಕೆ ಮಾಡಿದ್ದು ನಾನು. ಆದರೆ, ಲಾಭಾಂಶ ಹಾಗೂ ಹೂಡಿಕೆ ಮಾಡಿದ ಹಣ ವಾಪಸ್ ನೀಡದೇ ವಂಚಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರಿಗೆ ರೋಹಿತ್ ದೂರು ದಾಖಲಿಸಿದ್ದಾರೆ
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…