ಬೆಂಗಳೂರು: ಕಿರುತೆರೆಯಲ್ಲಿ ಮನೆಮಾತಾಗಿರುವ ‘ಕಮಲಿ’ ಧಾರಾವಾಹಿಯ ನಿರ್ದೇಶಕನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.
ಕಮಲಿ ನಿರ್ಮಾಪಕ ರೋಹಿತ್ ಅವರಿಗೆ ನಿರ್ದೇಶಕ ಅರವಿಂದ್ ಕೌಶಿಕ್ ಎಂಬುವರು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ, ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಕಮಲಿ ಧಾರಾವಾಹಿಗೆ ನಿರ್ಮಾಪಕ ರೋಹಿತ್, 73 ಲಕ್ಷ ಬಂಡವಾಳ ಹೂಡಿಕೆ ಮಾಡಿಸಿದ್ದಾರಂತೆ. ಹೂಡಿಕೆಯ ನಂತರ ಲಾಭಾಂಶ ಹಾಗೂ ಬಂಡವಾಳ ವಾಪಸ್ ನೀಡಿಲ್ಲವೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೇ 28 , 2018 ರಂದು ಕಮಲಿ ಧಾರಾವಾಹಿ ಶುರುವಾಗಿತ್ತು. ಸುಮಾರು 287 ಸಂಚಿಕೆಗಳ ಕಾಲ ರೋಹಿತ್ರನ್ನು ನಿರ್ಮಾಪಕನೆಂದು ತೋರಿಸಲಾಗಿತ್ತು. ನಂತರ ಧಾರವಾಹಿಯ ಟೈಟಲ್ ಕಾರ್ಡ್ನಿಂದ ರೋಹಿತ್ ಹೆಸರನ್ನು ಧಾರಾವಾಹಿ ತಂಡ ತೆಗೆದಿದೆ. ಈ ಮಧ್ಯೆ ನಿರ್ದೇಶಕ ಕೌಶಿಕ್, ತನ್ನ ಪತ್ನಿ ಶಿಲ್ಪಾ ಹಾಗೂ ನವೀನ್ ಸಾಗರ್ ಹೆಸರಿನಲ್ಲಿ ಸತ್ವ ಮೀಡಿಯಾ ಎಂದು ಅಗ್ರಿಮೆಂಟ್ ಮಾಡಿಕೊಂಡು ಲಾಭ ಪಡೆದಿದ್ದಾರೆ. ಧಾರವಾಹಿಗೆ 73 ಲಕ್ಷ ರೂ. ಹಣ ಹೂಡಿಕೆ ಮಾಡಿದ ನನ್ನ ಗಮನಕ್ಕೆ ತರದೇ ವಂಚನೆ ಮಾಡಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ.
ಸದ್ಯ ಕಮಲಿ ಧಾರಾವಾಹಿ 500 ಸಂಚಿಕೆಗಳನ್ನು ಪೂರೈಸಿದೆ. ಅಸಲಿಗೆ ಧಾರಾವಾಹಿ ನಿರ್ಮಾಣಕ್ಕೆ ಲಕ್ಷಗಟ್ಟಲೇ ಹಣ ಹೂಡಿಕೆ ಮಾಡಿದ್ದು ನಾನು. ಆದರೆ, ಲಾಭಾಂಶ ಹಾಗೂ ಹೂಡಿಕೆ ಮಾಡಿದ ಹಣ ವಾಪಸ್ ನೀಡದೇ ವಂಚಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತರಿಗೆ ರೋಹಿತ್ ದೂರು ದಾಖಲಿಸಿದ್ದಾರೆ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…