ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.
ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ʼಲವ್ ಮಾಕ್ಟೇಲ್ 3ʼ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರವಾಹಿಗಳಲ್ಲೂ ನಟಿಸಿದ್ದರು.
ಇಂದು ಬೆಳಗಿನ ಜಾವ ದಿಲೀಪ್ ರಾಜ್ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್ ರಾಜ್ ಅವರ ಮೃತದೇಹ ಕುಮಾರಸ್ವಾಮಿ ಲೇಔಟ್ನ ಅಪೋಲೊ ಆಸ್ಪತ್ರೆಯಲ್ಲಿರಿಸಲಾಗಿದೆ. ದಿಲೀಪ್ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…