ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ದಿಲೀಪ್ ರಾಜ್ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.
ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ʼಲವ್ ಮಾಕ್ಟೇಲ್ 3ʼ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರವಾಹಿಗಳಲ್ಲೂ ನಟಿಸಿದ್ದರು.
ಇಂದು ಬೆಳಗಿನ ಜಾವ ದಿಲೀಪ್ ರಾಜ್ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ದಿಲೀಪ್ ರಾಜ್ ಕೊನೆಯುಸಿರೆಳೆದಿದ್ದಾರೆ. ದಿಲೀಪ್ ರಾಜ್ ಅವರ ಮೃತದೇಹ ಕುಮಾರಸ್ವಾಮಿ ಲೇಔಟ್ನ ಅಪೋಲೊ ಆಸ್ಪತ್ರೆಯಲ್ಲಿರಿಸಲಾಗಿದೆ. ದಿಲೀಪ್ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…