Featured

ಕಿಸ್ ಮಾಡುವಾಗ ಪತಿಯ ಅರ್ಧ ನಾಲಿಗೆಯನ್ನೇ ಕಚ್ಚಿದ ಪತ್ನಿ..!

ನವದೆಹಲಿ,:-ತನ್ನ ಪತಿ ನೋಡಲು ಚೆನ್ನಾಗಿಲ್ಲ ಎಂದು ಪತ್ನಿಯೊಬ್ಬಳು ಆತನಿಗೆ ಕಿಸ್ ಮಾಡುತ್ತಲೇ ಅರ್ಧ ನಾಲಿಗೆ ಕಚ್ಚಿದ ಪ್ರಕರಣವೊಂದು ರಾಷ್ಟ್ರ ರಾಜಧಾನಿ ನವದೆಹಲಿಯ ಲಾಹೋರ್‍ನಲ್ಲಿ ನಡೆದಿದೆ.

ಎಂಟು ತಿಂಗಳ ಗರ್ಭಿಣಿಯಾಗಿರುವ ಪತ್ನಿ, ತನ್ನ ಪತಿ ನೋಡಲು ಚೆನ್ನಾಗಿಲ್ಲ ಎಂದು ಆತನ ಜೊತೆ ಯಾವಾಗಲೂ ಜಗಳವಾಡುತ್ತಿದ್ದಳು. ಹಾಗಾಗಿ ಆಕೆ ಪತಿಗೆ ಕಿಸ್ ಮಾಡುತ್ತಲೇ ನಾಲಿಗೆ ಕಚ್ಚಿದ್ದಾಳೆ. ಪತಿ ಮಹಾಶಯ ತನ್ನ ಅರ್ಧ ನಾಲಿಗೆಯನ್ನೇ ಕಳೆದುಕೊಂಡಿದ್ದಾನೆ. ಈ ಇಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ. ಪದೇ ಪದೇ ಜಗಳವಾಡುತ್ತಿದ್ದರು. ಗಂಡ-ಹೆಂಡಿರ ಜಗಳ ಉಂಡು ಮಲಗುವ ತನಕ ಎಂಬಂತೆ ಒಂದಾಗುತ್ತಿದ್ದರು.

ಆದರೆ ನಿನ್ನೆ ರಾತ್ರಿ ಈಕೆ ತನ್ನ ಪತಿಗೆ ಮುತ್ತು ಕೊಡಲು ಮುಂದಾಗಿ ಅರ್ಧ ನಾಲಿಗೆಯನ್ನು ಬಲಿ ಪಡೆದಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರು ಪತಿಯ ತಂದೆಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಅರ್ಧ ನಾಲಿಗೆ ಕಳೆದುಕೊಂಡ ಪತಿ ಮಹಾಶಯ ಸಪ್ತರ್‍ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಸ್ತ್ರ ಚಿಕಿತ್ಸೆ ನಂತರ ಆತ ಮಾತನಾಡಲು ಆಗುತ್ತದೆಯೋ ಅಥವಾ ಇಲ್ಲವೋ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. 2016ರ ನವೆಂಬರ್‍ನಲ್ಲಿ ಈ ಇಬ್ಬರೂ ವಿವಾಹವಾಗಿದ್ದರು.

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

10 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

11 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

11 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

11 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

11 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

11 hours ago