Featured

ಕುಂದಗೋಳ ಉಪ ಚುನಾವಣೆ: ಪ್ರಚಾರದ ವೇಳೆ ಡಿ.ಕೆ‌ ಶಿವಕುಮಾರ್ ಕಣ್ಣೀರು -Vishwanews24

ಹುಬ್ಬಳ್ಳಿ: ಕುಂದಗೋಳ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷದ ಮುಖಂಡರು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಈ ವೇಳೆ ಜಲಸಂನ್ಮೂಲ ಸಚಿವ ಡಿ.ಕೆ ಶಿವಕುಮಾರ್ ದಿವಗಂತ ಸಿ.ಎಸ್​ ಶಿವಳ್ಳಿ ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ.
ಇಂದು ಇಂಗಳಗಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರ ಪರ ಪ್ರಚಾರ ನಡೆಸಿದ ಡಿಕೆಶಿ, ಶಿವಳ್ಳಿ ಅವರು ಜಾತಿ ನೋಡದೆ ಎಲ್ಲರ ಸೇವೆ ಮಾಡಿದರು. ಕೊನೆಯವರೆಗೂ ಬಡವರ ಪರ ಕೆಲಸ ಮಾಡಿದರು. ನಿಮ್ಮ ಮುಂದೆ ನಿಂತು ಮತಯಾಚನೆ ಮಾಡುತ್ತಿದ್ದೇನೆ. ಇದು ಶಿವಳ್ಳಿ ಚುನಾವಣೆಯಲ್ಲ. ನಿಮ್ಮ ಚುನಾವಣೆ. ನಿಮ್ಮೆಲ್ಲರ ಪಾದಗಳಿಗೆ ನಮಸ್ಕಾರ ಮಾಡುತ್ತೇನೆ. ಶಿವಳ್ಳಿಯನ್ನು ಉಳಿಸಿಕೊಳ್ಳಿ ಎಂದು ಅಳುತ್ತಲೇ ಹೇಳಿದರು.
ಶಿವಳ್ಳಿ ಅವರ ನಿಧನದ ನಂತರ ಕುಸುಮಕ್ಕ ನಮ್ಮ ಮನೆಗಾಗಲಿ, ದಿನೇಶ್​ ಗುಂಡೂರಾವ್​ ಅವರ ಮನೆಗಾಗಲೀ ಬಂದು ಚುನಾವಣೆಯಲ್ಲಿ ಸೀಟು ಕೊಡಿ ಎಂದು ಕೇಳಲಿಲ್ಲ. ಕಾರ್ಯಕರ್ತರೇ ನಿರ್ಧರಿಸಿದ್ದಾರೆ. ಕುಸುಮಕ್ಕನನ್ನು ಗೆಲ್ಲಿಸಿಕೊಡಿ ,ಅವಳನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ ಎಂದು ಅವರು ಭಾವುಕರಾದರು.
ನನ್ನ ಕ್ಷೇತ್ರವನ್ನು ಹೇಗೆ ನೋಡಿಕೊಳ್ಳುತ್ತಿದ್ದೇನೋ, ಹಾಗೇ ಕುಂದಗೋಳವನ್ನೂ ನೋಡಿಕೊಳ್ಳುತ್ತೇನೆ. ಈಗ ಚುನಾವಣೆ ಬಂದಿದೆ ವೋಟು ಕೊಡಿ ಎಂದು ಕಣ್ಣಿರು ಹಾಕಿಲ್ಲ, ಬದಲಿಗೆ ನನಗೆ ತುಂಬಾ ಹತ್ತಿರವಾದ ಗೆಳೆಯ ಅವನು. ಶಿವಳ್ಳಿ ಕಳೆದು ಕೊಂಡು ನನಗೆ ನೋವಾಗಿದೆ ಹೀಗಾಗಿ ನನಗೆ ಅಳು ಬಂದಿದೆ  ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದರು.
Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

13 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago