ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದ್ದು, ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣವನ್ನು ಮಾನ್ಯ ಪ್ರಧಾನಮಂತ್ರಿಗಳು ನೇರವಾಗಿ ಫಲಾನುಭವಿಗಳ ಖಾತೆಗೆ ನೇರವಾಗಿ ಬಿಡುಗಡೆ/ವರ್ಗಾವಣೆ ಮಾಡಲಿದ್ದಾರೆ.
ದೇಶದ ಒಟ್ಟು 8 ಕೋಟಿ ರೈತರ ಖಾತೆಗೆ ತಲಾ 2 ಸಾವಿರದಂತೆ 16 ಸಾವಿರ ಕೋಟಿ ರೂಪಾಯಿ. ಇದರಲ್ಲಿ ಕರ್ನಾಟಕ ರಾಜ್ಯದ 49.55 ರೈತರಿಗೆ 991 ಕೋಟಿ ರೂಪಾಯಿ ಮತ್ತು ಬೆಳಗಾವಿ ಜಿಲ್ಲೆಯ 5.10 ಲಕ್ಷ ರೈತರ ಖಾತೆಗೆ 102 ಕೋಟಿ ರೂಪಾಯಿಗಳನ್ನು ಪ್ರಧಾನಮಂತ್ರಿಗಳು ವರ್ಗಾವಣೆ ಮಾಡಲಿದ್ದಾರೆ.
ಜನಜೀವನ ಮಿಷನ್ ಯೋಜನೆಯಡಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 1120 ಕೋಟಿ ರೂಪಾಯಿ ವೆಚ್ಚದ ವಿವಿಧ ತಾಲ್ಲೂಕುಗಳ ಐದು ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಿಗಳು ಬಟನ್ ಒತ್ತುವ ಮೂಲಕ 8 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ನಿಧಿಯ ಯೋಜನೆಯ ಹಣ ವರ್ಗಾವಣೆ ಮಾಡಲಿದ್ದಾರೆ. ಲೋಂಡಾ- ಬೆಳಗಾವಿ- ಘಟಪ್ರಭಾ ಡಬ್ಲಿಂಗ್ ರೈಲು ಮಾರ್ಗವನ್ನು ಅವರು ದೇಶಕ್ಕೆ ಸಮರ್ಪಣೆ ಮಾಡುವರು. ನವೀಕರಣಗೊಂಡ ಬೆಳಗಾವಿ ರೈಲು ನಿಲ್ದಾಣ ಹಾಗೂ ಜಲಜೀನ್ ಮಿಷನ್ ಅಡಿ ನಡೆದ ಕಾಮಗಾರಿಗಳನ್ನು ಉದ್ಘಾಟಿಸುವರು.
ಬೃಹತ್ ರೋಡ್ ಶೋ:
ಬೆಳಗಾವಿ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಿದ ಬಳಿಕ ಮಧ್ಯಾಹ್ನ ಮಾಲಿನಿ ಸಿಟಿ ಮೈದಾನದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನ ಮಂತ್ರಿಗಳು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕೆಎಸ್ಆರ್ಪಿ ಮೈದಾನಕ್ಕೆ ತೆರಳುವರು. ಅಲ್ಲಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಬಂದ ನಂತರ, ರೋಡ್ ಶೋ ಆರಂಭಿಸಲಿದ್ದಾರೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…