ಉಡುಪಿ

ಕುಂದಾಪುರದಲ್ಲಿ ಚುನಾವಣಾ ಅಧಿಕಾರಿಗಳ ಮೇಲೆ ಹಲ್ಲೆ ಯತ್ನ.!

ಉಡುಪಿ: ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಅಧಿಕಾರಿಗಳ ಮೇಲೆ ಜಿಲ್ಲೆಯ ಕುಂದಾಪುರದಲ್ಲಿ ಹಲ್ಲೆಯತ್ನ ನಡೆದಿದೆ. ಕುಂದಾಪುರದ ಸಹನಾ ರೆಸ್ಟೋರೆಂಟ್ ಮೇಲೆ ದಾಳಿ ಮಾಡಲು ತೆರಳಿದ್ದ ಕುಂದಾಪುರ ಸಹಾಯಕ ಕಮಿಷನರ್ ಮತ್ತು ಐಎಎಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ.

ಸಹನಾ ಹೋಟೆಲ್ ಮತ್ತು ಲಾಡ್ಜ್ ನಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಕುಂದಾಪುರ ಸಹಾಯಕ ಕಮಿಷನರ್ ಭೂಬಾಲನ್ ಮತ್ತು ಐಎಎಸ್ ಅಧಿಕಾರಿ ಪೂವಿತಾ ಅವರಿಗೆ ಸಾರ್ವಜನಿಕರು ದೂರು ನೀಡಿದ್ದರು.

ಚುನಾವಣಾ ನೀತಿ ಸಂಹಿತೆ ಪಾಲನೆ ನಿಟ್ಟಿನಲ್ಲಿ ಸೋಮವಾರ ರಾತ್ರಿ ಕುಂದಾಪುರ ಬಳಿ ರಾಷ್ಟ್ರೀಯ ಹೆದ್ದಾರಿ ಕೋಟೇಶ್ವರದ ಸಹನಾ ಹೋಟೆಲ್ ಆಂಡ್ ಲಾಡ್ಜ್ ಹೋಟೆಲ್ ಮೇಲೆ ದಾಳಿ ನಡೆಸಿದ್ದರು. ಸಹನಾ ಹೋಟೆಲಿನಲ್ಲಿ ಹೊರಗಿನವರಿಗೆ ಮದ್ಯ ಸರಬರಾಜಿಗೆ ಅವಕಾಶ ಇಲ್ಲದೆ ಹೋದರೂ ಅನಧಿಕೃತವಾಗಿ ಮದ್ಯ ಸರಬರಾಜು ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ಹೋಟೆಲಿನವರೊಂದಿಗೆ ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಹೋಟೆಲಿನವರು ಮತ್ತು ಅಲ್ಲಿದ್ದ ಕೆಲವರೊಂದಿಗೆ ಮಾತಿನ ಚಕಮಕಿ ನಡೆದಿದೆ. ಅಪಾಯದ ಮುನ್ಸೂಚನೆಯನ್ನು ಅರಿತ ಅಧಿಕಾರಿಗಳು ಕೂಡಲೇ ಕುಂದಾಪುರ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನಿಬ್ಬರು ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದು ಶೋಧ ಕಾರ್ಯ ನಡೆದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರ್ಗಿ ಮಾಹಿತಿ ನೀಡಿದ್ದಾರೆ. ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಸಲುವಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಹಾಯಕ ಕಮೀಷನರ್ ಅವರಿಗೆ ಗನ್ ಮ್ಯಾನ್ ನೀಡಿದ್ದು, ಇದರಿಂದ ನಡೆಯಬಹುದಾದ ಹಲ್ಲೆ ತಪ್ಪಿದೆ.

ಚುನಾವಣಾ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಹೋಟೆಲಿನವರ ಮೇಲೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago