Featured

ಕುಂದಾಪುರದ ರಸ್ತೆ ಅಭಿವೃದ್ಧಿಗಾಗಿ 30 ಕೋ.ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು  : ಹಾಲಾಡಿ -Vishwanews24

ಕುಂದಾಪುರದ ರಸ್ತೆ ಅಭಿವೃದ್ಧಿಗಾಗಿ 30 ಕೋ.ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು  : ಹಾಲಾಡಿ -Vishwanews24

ಉಡುಪಿ : ಕುಂದಾಪುರ ವಿಧಾನಸಭಾ ಕ್ಷೇತ್ರದ ಪ್ರಮುಖ ರಸ್ತೆಗಳಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು 30 ಕೋ.ರೂ.ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

ಕೋಟೇಶ್ವರ-ಸೋಮೇಶ್ವರ ಜಿಲ್ಲಾ ಮುಖ್ಯ ರಸ್ತೆಯ ಹೊಂಬಾಡಿಯಿಂದ ಹಾಲಾಡಿವರೆಗೆ ಭೂಸ್ವಾಧೀನ ಸೇರಿದಂತೆ ರಸ್ತೆ ವಿಸ್ತರಣೆ ಮತ್ತು ಅಭಿವೃದ್ಧಿಗೆ 15 ಕೋ.ರೂ. ಹಾಗೂ ಬ್ರಹ್ಮಾವರ-ಜನ್ನಾಡಿ ಜಿಲ್ಲಾ ಮುಖ್ಯ ರಸ್ತೆಯ ಬಾರ್ಕೂರು ಪೇಟೆಯಿಂದ ಹಳ್ಳಾಡಿವರೆಗೆ ಭೂಸ್ವಾಧೀನ ಸೇರಿದಂತೆ ರಸ್ತೆ ವಿಸ್ತರಣೆ ಮತ್ತು ಅಭಿವೃದ್ಧಿಗೊಳಿಸಲು 15 ಕೋ.ರೂ.ಅಗತ್ಯವಿದೆ ಎಂದು ಈ ವೇಳೆ ತಿಳಿಸಿದ್ದಾರೆ

ಕುಂದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಯಲ್ಲಿ ಭೂಸ್ವಾಧೀನ ಮಾಡಿ ರಸ್ತೆ ಅಗಲೀಕರಣ ಮಾಡುವುದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ. ಪಂಚಾಯತ್ ಅಧ್ಯಕ್ಷರ ನಿರ್ಣಯದ ಪ್ರಕಾರ ನಾನು ಬದ್ಧನಾಗಿ ಜನಪರ ಕೆಲಸ ಮಾಡಿದ್ದೇನೆ. ಭೂಸ್ವಾಧೀನ ಮಾಡಿಕೊಂಡು ಭೂ ಸಂತ್ರಸ್ತರಿಗೆ ಪರಿಹಾರ ಕೊಟ್ಟು ರಸ್ತೆ ವಿಸ್ತರಣೆ ಮಾಡಲಿ. ಇಲ್ಲದಿದ್ದರೆ ಜನ ಸಾಮಾನ್ಯರಿಗೆ ಕಷ್ಟ ಆಗುತ್ತದೆ ಎಂದು ಹೇಳಿದ್ದೆ. ಈ ಬಗ್ಗೆ 2013 ರಿಂದ ವಿಧಾನ ಸಭೆಯಲ್ಲಿ ಪ್ರಶ್ನಿಸುತ್ತಿದ್ದೇನೆ. ಸರಕಾರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ದೇಶದ ರೈತರ ಹಿತಾಸಕ್ತಿ ಕಾಪಾಡುವುದಕ್ಕಾಗಿ ಕೇಂದ್ರ ಸರಕಾರ ಮೂರು ಕೃಷಿ ಕಾಯ್ದೆಯ ಬಗ್ಗೆ ಸಾಕಷ್ಟು ವಿಮರ್ಶೆಗೆ ಒಳಪಡಿಸಿ ಈಗ ಹಿಂದೆಗೆದುಕೊಂಡಿದೆ. ಉಳಿದಂತೆ ಕೇಂದ್ರ ಸರಕಾರದ ಈ ನಿರ್ಧಾರದ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ

ಸರಕಾರದ ಕಾಯ್ದೆ, ಕಾನೂನಿಗೆ ಕೆಲವೊಮ್ಮೆ ವಿರೋಧ, ಪರವಾಗಿ ಮಾತನಾಡುವುದು, ಅಸ್ಪಷ್ಟ ಮಾಹಿತಿಯಿಂದ ಪ್ರತಿಭಟಿಸುವುದು ಸಾಮಾನ್ಯ. ಈ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ತಿಳುವಳಿಕೆ ಪಡೆದು ಕೊಂಡು ವಿಮರ್ಶೆ ನಡೆಸಿ ಕೇಂದ್ರ ಸರಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮಲ್ಲಿ ಸದ್ಯ ಮತದಾರರು ಪಟ್ಟಣ ಪಂಚಾಯತ್, ಪುರಸಭೆ, ಗ್ರಾ.ಪಂ.ಸದಸ್ಯರು ಮಾತ್ರ ಇದ್ದಾರೆ. ಇವರೆಲ್ಲ ಪಕ್ಷದ ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದವರಲ್ಲ. ರಾಜಕೀಯ ಪಕ್ಷ ಬೆಂಬಲಿತರಾಗಿದ್ದಾರೆ. ಮತದಾರರು ಅಭಿವೃದ್ದಿ ನೋಡಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

4 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

5 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

7 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

7 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

7 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

7 hours ago