Featured

ಕುಂದಾಪುರದ ರಸ್ತೆ ಅಭಿವೃದ್ಧಿಗಾಗಿ 30 ಕೋ.ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು  : ಹಾಲಾಡಿ -Vishwanews24

ಕುಂದಾಪುರದ ರಸ್ತೆ ಅಭಿವೃದ್ಧಿಗಾಗಿ 30 ಕೋ.ರೂ. ವಿಶೇಷ ಅನುದಾನ ಮಂಜೂರು ಮಾಡಬೇಕು  : ಹಾಲಾಡಿ -Vishwanews24

ಉಡುಪಿ : ಕುಂದಾಪುರ ವಿಧಾನಸಭಾ ಕ್ಷೇತ್ರದ ಪ್ರಮುಖ ರಸ್ತೆಗಳಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು 30 ಕೋ.ರೂ.ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

ಕೋಟೇಶ್ವರ-ಸೋಮೇಶ್ವರ ಜಿಲ್ಲಾ ಮುಖ್ಯ ರಸ್ತೆಯ ಹೊಂಬಾಡಿಯಿಂದ ಹಾಲಾಡಿವರೆಗೆ ಭೂಸ್ವಾಧೀನ ಸೇರಿದಂತೆ ರಸ್ತೆ ವಿಸ್ತರಣೆ ಮತ್ತು ಅಭಿವೃದ್ಧಿಗೆ 15 ಕೋ.ರೂ. ಹಾಗೂ ಬ್ರಹ್ಮಾವರ-ಜನ್ನಾಡಿ ಜಿಲ್ಲಾ ಮುಖ್ಯ ರಸ್ತೆಯ ಬಾರ್ಕೂರು ಪೇಟೆಯಿಂದ ಹಳ್ಳಾಡಿವರೆಗೆ ಭೂಸ್ವಾಧೀನ ಸೇರಿದಂತೆ ರಸ್ತೆ ವಿಸ್ತರಣೆ ಮತ್ತು ಅಭಿವೃದ್ಧಿಗೊಳಿಸಲು 15 ಕೋ.ರೂ.ಅಗತ್ಯವಿದೆ ಎಂದು ಈ ವೇಳೆ ತಿಳಿಸಿದ್ದಾರೆ

ಕುಂದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಯಲ್ಲಿ ಭೂಸ್ವಾಧೀನ ಮಾಡಿ ರಸ್ತೆ ಅಗಲೀಕರಣ ಮಾಡುವುದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ. ಪಂಚಾಯತ್ ಅಧ್ಯಕ್ಷರ ನಿರ್ಣಯದ ಪ್ರಕಾರ ನಾನು ಬದ್ಧನಾಗಿ ಜನಪರ ಕೆಲಸ ಮಾಡಿದ್ದೇನೆ. ಭೂಸ್ವಾಧೀನ ಮಾಡಿಕೊಂಡು ಭೂ ಸಂತ್ರಸ್ತರಿಗೆ ಪರಿಹಾರ ಕೊಟ್ಟು ರಸ್ತೆ ವಿಸ್ತರಣೆ ಮಾಡಲಿ. ಇಲ್ಲದಿದ್ದರೆ ಜನ ಸಾಮಾನ್ಯರಿಗೆ ಕಷ್ಟ ಆಗುತ್ತದೆ ಎಂದು ಹೇಳಿದ್ದೆ. ಈ ಬಗ್ಗೆ 2013 ರಿಂದ ವಿಧಾನ ಸಭೆಯಲ್ಲಿ ಪ್ರಶ್ನಿಸುತ್ತಿದ್ದೇನೆ. ಸರಕಾರ ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ದೇಶದ ರೈತರ ಹಿತಾಸಕ್ತಿ ಕಾಪಾಡುವುದಕ್ಕಾಗಿ ಕೇಂದ್ರ ಸರಕಾರ ಮೂರು ಕೃಷಿ ಕಾಯ್ದೆಯ ಬಗ್ಗೆ ಸಾಕಷ್ಟು ವಿಮರ್ಶೆಗೆ ಒಳಪಡಿಸಿ ಈಗ ಹಿಂದೆಗೆದುಕೊಂಡಿದೆ. ಉಳಿದಂತೆ ಕೇಂದ್ರ ಸರಕಾರದ ಈ ನಿರ್ಧಾರದ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ

ಸರಕಾರದ ಕಾಯ್ದೆ, ಕಾನೂನಿಗೆ ಕೆಲವೊಮ್ಮೆ ವಿರೋಧ, ಪರವಾಗಿ ಮಾತನಾಡುವುದು, ಅಸ್ಪಷ್ಟ ಮಾಹಿತಿಯಿಂದ ಪ್ರತಿಭಟಿಸುವುದು ಸಾಮಾನ್ಯ. ಈ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ತಿಳುವಳಿಕೆ ಪಡೆದು ಕೊಂಡು ವಿಮರ್ಶೆ ನಡೆಸಿ ಕೇಂದ್ರ ಸರಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮಲ್ಲಿ ಸದ್ಯ ಮತದಾರರು ಪಟ್ಟಣ ಪಂಚಾಯತ್, ಪುರಸಭೆ, ಗ್ರಾ.ಪಂ.ಸದಸ್ಯರು ಮಾತ್ರ ಇದ್ದಾರೆ. ಇವರೆಲ್ಲ ಪಕ್ಷದ ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದವರಲ್ಲ. ರಾಜಕೀಯ ಪಕ್ಷ ಬೆಂಬಲಿತರಾಗಿದ್ದಾರೆ. ಮತದಾರರು ಅಭಿವೃದ್ದಿ ನೋಡಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

2 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

2 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

4 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

5 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

6 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

6 hours ago