ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಜನವಿರೋಧಿ ನಿಲುವಿನ ವಿರುದ್ಧ ಹೆಜಮಾಡಿಯಿಂದ ಬೈಂದೂರು ವರೆಗೆ ನಡೆಯುತ್ತಿರುವ ಜನಧ್ವನಿ ಪಾದಯಾತ್ರೆ ಇಂದು ಮಧ್ಯಾಹ್ನ ಸಾಲಿಗ್ರಾಮದಿಂದ ಹೊರಟ ಪಾದಯಾತ್ರೆ ಕೋಟ, ತೆಕ್ಕಟ್ಟೆ ಮೂಲಕ ಕುಂದಾಪುರ ತಲುಪಿದೆ.
ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ಪಾದಯಾತ್ರೆಯನ್ನುದ್ದೇಶಿಸಿ ಕಾಂಗ್ರೆಸ್ ಮುಖಂಡರಾದ ಸುಧೀರ್ ಕುಮಾರ್ ಮರವಳ್ಳಿ ಮಾತನಾಡಿ, ಪಾದಯಾತ್ರೆಯ ಉದ್ದೇಶ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಕೇಂದ್ರ ಸರ್ಕಾರ ರೈತರ ಬೇಡಿಕೆ, ನಿರಂತರ ನಡೆಯುತ್ತಿರುವ ಚಳವಳಿ ಲೆಕ್ಕಿಸದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೆ ಕಾಂಗ್ರೆಸ್ ಸರ್ಕಾರ ಬಡವರಿಗೆ ಅಕ್ರಮ ಸಕ್ರಮದ ಮೂಲಕ ಭೂಮಿ ನೀಡುವ ಕೆಲಸ ಮಾಡಿತ್ತು. ಆದರೆ, ಈ ಸರ್ಕಾರ ಸರ್ಕಾರಿ ಭೂಮಿಯಲ್ಲಿ ಕುಳಿತವರ ಮೇಲೂ ಕೇಸು ಹಾಕಲು ಮುಂದಾಗುತ್ತಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರುತ್ತಲೇ ಇದೆ. ಗ್ಯಾಸ್ ಸಬ್ಸಿಡಿ ತೆಗೆದು ಹಾಕಲಾಗಿದೆ. ದಿನಬಳಕೆಯ ವಸ್ತುಗಳ ಬೆಲೆಯೂ ಗಗನಕ್ಕೇರುತ್ತಿದೆ. ಸರಕಾರಿ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣವಾಗುತ್ತಿದೆ. ಕೊರೊನಾ ಬಿಕ್ಕಟ್ಟಿನಲ್ಲಿಯೂ ವಿಪರೀತ ಬೆಲೆ ಏರಿಕೆಯ ಹೊಡೆತ ಜನತೆಗೆ ಈ ಸರ್ಕಾರಗಳು ನೀಡುತ್ತಿವೆ ಎಂದರು.
ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಮೆಟ್ರೋ ಮ್ಯಾನ್ ಖ್ಯಾತಿಯ ಇ . ಶ್ರೀಧರನ್ -Vishwanews24
ಕಾಂಗ್ರೆಸ್ ಅಧ್ಯಕ್ಷ ಎಚ್.ಹರಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಶಂಕರ್ ಕುಂದರ್, ಎಂ.ಎ. ಗಫೂರ್,ಅಶೋಕ್ ಪೂಜಾರಿ,ಚಂದ್ರಶೇಖರ್ ಖಾರ್ವಿ ಪುರಸಭೆ ಸದಸ್ಯರು, ಕಿಶನ್ ಹೆಗ್ಡೆ ಕೊಳ್ಕೆಬೈಲು, ಒಲಿವೇರ, ವರೋನಿಕಾ ಕರ್ವೇಲ್ಲೊ, ದೇವಾನಂದ ಶೆಟ್ಟಿ, ಚಂದ್ರಶೇಖರ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭ ‘ರೈತರ ಭದ್ರತೆ- ದೇಶದ ಭದ್ರತೆ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…