ಕುಂದಾಪುರ: ಕೋಟ ತಟ್ಟು ಗ್ರಾಮದ ಕೊರಗ ಸಮುದಾಯದವರ ಮೆಹೆಂದಿ ಮನೆಗೆ ನುಗ್ಗಿ ಕೋಟ ಠಾಣೆಯ ಪೊಲೀಸರು ನುಗ್ಗಿ ದಾಂಧಲೆ ನಡೆಸಿ ಲಾಠಿ ಚಾರ್ಜ್ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ.
ಸೋಮವಾರ ಸಂಜೆ ಕೋಟ ತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದವರೊಬ್ಬರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಡಿಜೆ ಹಾಕಿರುವುದನ್ನು ಆಕ್ಷೇಪಿಸಿ ಸ್ಥಳೀಯರು 112 ಗೆ ಕರೆ ಮಾಡಿ ತಿಳಿಸಿದ್ದು ಅದರಂತೆ ಕೋಟ ಪೊಲೀಸರು ಸ್ಥಳಕ್ಕೆ ಹೋಗಿ ಕಾರ್ಯಕ್ರಮದಲ್ಲಿ ಇದ್ದವರಿಗೆ ಮನಬಂದಂತೆ ಥಳೀಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಮದುಮಗ ಸೇರಿದಂತೆ ಹಲವರ ಮೇಲೆ ಹಲ್ಲೆಯಾಗಿದ್ದು, ಸಮುದಾಯದ ಮುಖಂಡರನ್ನು ಠಾಣೆಗೆ ಕರೆಯಿಸಿ ಅಂಗಿ ಬಿಚ್ಚಿಸಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳು ವೈರಲ್ ಆಗುತ್ತಿದ್ದು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೋಟ ತಟ್ಟುವಿನ ಕೊರಗ ಕಾಲೋನಿಯದ ಚಿಟ್ಟು ಬೆಟ್ಟುವಿನಲ್ಲಿ ಮದುವೆಯ ಮುನ್ನ ದಿನವಾದ ಸೋಮವಾರ ರಾತ್ರಿ ಮೆಹೆಂದಿ ಕಾರ್ಯಕ್ರಮ ನಡೆಯುತ್ತಿರುವಾಗ ಪೊಲೀಸರು ಏಕಾಏಕಿ ನುಗ್ಗಿ ಲಾಠಿಚಾರ್ಜ್ ನಡೆಸಿದ ಆರೋಪ ಇದೆ. ದುರ್ಬಲ ಸಮುದಾಯದ ವಿರುದ್ಧದ ಈ ರೀತಿಯ ವರ್ತನೆಯನ್ನು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ತೀವ್ರವಾಗಿ ಖಂಡಿಸುತ್ತದೆ. ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ಸೇರಿ ಈ ರೀತಿಯ ವರ್ತನೆ ಮಾಡಿರುವ ಕುರಿತು ಆರೋಪ ಕೇಳಿ ಬಂದಿದೆ. ಅದರೊಂದಿಗೆ ಕೊರಗ ಸಮುದಾಯದ ನಾಯಕ ಗಣೇಶ್ ಅವರಿಗೂ ತೀವ್ರವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಈ ಕುರಿತು ಕೂಡಲೇ ಸರಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಆಗ್ರಹಿಸುತ್ತದೆ.
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…