Featured

ಕುಂದಾಪುರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋದಾಮು ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ,ಅಪಾರ ಪ್ರಮಾಣದ  ಪಡಿತರ ಅಕ್ಕಿ ವಶಕ್ಕೆ -Vishwanews24

ಕುಂದಾಪುರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋದಾಮು ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ,ಅಪಾರ ಪ್ರಮಾಣದ  ಪಡಿತರ ಅಕ್ಕಿ ವಶಕ್ಕೆ -Vishwanews24

ಕುಂದಾಪುರ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋದಾಮು ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಶನಿವಾರ ರಾತ್ರಿ ದಾಳಿ ನಡೆಸಿ, ಅಪಾರ ಪ್ರಮಾಣದ ಅಕ್ಕಿ ವಶಕ್ಕೆ ಪಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿ ವೇಳೆ ಮೂವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.

ಆರೋಪಿಗಳನ್ನು ಕೋಟೆಶ್ವರ ನಿವಾಸಿ ಉದಯ್ ಕುಮಾರ್ ಶೆಟ್ಟಿ, ಮಂಗಳೂರು ನಿವಾಸಿ ಆಜಾಮ್, ಉಡುಪಿ ನಿವಾಸಿ ರಮಾ ಪೂಜಾರಿ ಎಂದು ತಿಳಿದು ಬಂದಿದ್ದು, ಆರೋಪಿಗಳಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ.

ಕೋಟೆಶ್ವರ ಗ್ರಾಮದ ಹಾಲಾಡಿ ರಸ್ತೆಯಲ್ಲಿರುವ ನಂದಿ ಹೋಟೆಲ್ ನ ಹಿಂಭಾಗದ ಉದಯ್ ಕುಮಾರ್ ಶೆಟ್ಟಿಯವರ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಕುಂದಾಪುರ ಠಾಣಾಧಿಕಾರಿ ಸದಾಶಿವ ಗವರೋಜಿ ಮತ್ತು ಸಿಬ್ಬಂದಿಗಳು ದಾಳಿ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ವಿವಿಧ ಸಾಮಾಜಿಕ ಯೋಜನೆಗೆ ವಿತರಣೆಯಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಂಗ್ರಹಣೆ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ 3,76,800 ರೂ. ಮೌಲ್ಯದ 25,120 ಕೆಜಿ ಪಡಿತರ ಅಕ್ಕಿ, 2 ಲಕ್ಷ ರೂ ಮೌಲ್ಯದ ಅಶೋಕ್ ಲೈಲ್ಯಾಡ್ ಗೂಡ್ಸ್ ವಾಹನ, 4 ಲಕ್ಷ ರೂ ಮೌಲ್ಯದ ಟಾಟಾ ವಾಹನ , 2,000 ರೂ. ಮೌಲ್ಯದ ಹೊಲಿಗೆ ಯಂತ್ರ ಹಾಗೂ 3,000 ರೂ. ಮೌಲ್ಯದ ತೂಕ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಉಡುಪಿ:ಕೊರೊನಾ ಅವಧಿಯಲ್ಲಿ ಸಾವನ್ನಪ್ಪಿದ ಅಂಗನವಾಡಿ ಕೊರೊನಾ ವಾರಿಯರ್ಸ್ ಗೆ ಸರಕಾರ ಇನ್ನೂ ಪರಿಹಾರ ನೀಡಿಲ್ಲ : ಸಂಘದ ರಾಜ್ಯಾಧ್ಯಕ್ಷೆ ಆಕ್ರೋಶ -Vishwanews24

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago