ಕುಂದಾಪುರ: ಅಕ್ರಮ ಕಸಾಯಿಖಾನೆಗೆ ದಾಳಿ ಮಾಡಿ ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳನ್ನು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ರಕ್ಷಣೆ ಮಾಡಿದ ಘಟನೆ ಗುಳ್ವಾಡಿ ಎಂಬಲ್ಲಿ ಭಾನುವಾರ ನಡೆದಿದೆ.
ಕುಂದಾಪುರ ತಾಲೂಕಲ್ಲಿ ಆಗಾಗ್ಗೆ ದನಗಳು ಕಳವಾಗುತ್ತಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮತ್ತು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರ ನೆರವಿನೊಂದಿಗೆ ಗುಳ್ವಾಡಿ ಅಬೂಬಕ್ಕರ್ ಎಂಬವರ ಮನೆಗೆ ದಾಳಿ ಮಾಡಿದ ವೇಳೆ ಮನೆಯಲ್ಲಿ ಮಾಂಸಕ್ಕಾಗಿ ದನಗಳನ್ನು ಕೂಡಿ ಹಾಕಿರುವುದು ಕಂಡುಬಂದಿದ್ದು, ಪೊಲೀಸರು ಅವುಗಳನ್ನು ರಕ್ಷಿಸಿದ್ದಾರೆ. ದಾಳಿಯ ವೇಳೆ ಆರೋಪಿ ಅಬೂಬಕ್ಕರ್ ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಕುರಿತು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…