ಕುಂದಾಪುರ : ಅಜ್ಜ ಮೃತಪಟ್ಟ ವಿಷಯ ತಿಳಿದು ಅಂತಿಮ ದರ್ಶನಕ್ಕೆ ಚಾಮರಾಜನಗರದಿಂದ ಆಗಮಿಸುತ್ತಿದ್ದ ಮೊಮ್ಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಕುಂದಾಪುರದಲ್ಲಿ ನಡೆದಿದೆ.
ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಎಂಬವರ ಏಕೈಕ ಪುತ್ರ ನಿತೀಶ್ ಪೂಜಾರಿ (20) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಇವರು ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನ 2ನೆ ವರ್ಷದ ವಿದ್ಯಾರ್ಥಿಯಾಗಿದ್ದರು.
ನಿತೀಶ್ ಅವರ ಅಜ್ಜ, ಕುಂದಾಪುರ ಶೇಡಿಮನೆ ಗ್ರಾಮದ ಪಾಟ್ಲಮಕ್ಕಿ ನಿವಾಸಿ ನಾರಾಯಣ ಪೂಜಾರಿ(70) ಸೋಮವಾರ ಮೃತಪಟ್ಟಿದ್ದರು. ವಿಷಯ ತಿಳಿದ ನಿತೀಶ್ ಪೂಜಾರಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗಮಿಸುವುದಾಗಿ ಹೇಳಿದ್ದರು. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಅಜ್ಜನ ಮೇಲಿನ ಪ್ರೀತಿಯಿಂದ ಅವರು ಚಾಮರಾಜನಗರದಿಂದ ಬೈಕಿನಲ್ಲಿ ಊರಿಗೆ ಹೊರಟಿದ್ದರು. ಈ ಸಂದರ್ಭ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ತಲುಪಿದಾಗ ರಸ್ತೆ ಮಧ್ಯದಲ್ಲಿದ್ದ ಹಂಪ್ ಗಮನಕ್ಕೆ ಬಾರದ ಕಾರಣ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದ ನಿತೀಶ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಬಳಿಕ ಯುವಕನ ಮೃತದೇಹವನ್ನು ತಂದು ಶೇಡಿ ಮನೆಯಲ್ಲಿ (ತಾಯಿಯ ತಂದೆ ಮನೆ)ಅಜ್ಜ-ಮೊಮ್ಮಗನ ಅಂತ್ಯ ಸಂಸ್ಕಾರವನ್ನು ಜತೆಯಾಗಿ ನೆರವೇರಿಸಲಾಯಿತು.
ಅಪಘಾತದ ಬಗ್ಗೆ ಚಾಮರಾಜನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…