ಕುಂದಾಪುರ: ನಗರದ ಮುಖ್ಯ ರಸ್ತೆಯ ಹಳೇ ಗೀತಾಂಜಲಿ ಟಾಕೀಸಿನ ಜಾಗದಲ್ಲಿ ನಿರ್ಮಿಸಲಾಗಿದ್ದ ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮಹಿಳೆಯನ್ನು ಫ್ಲ್ಯಾಟಿನ ನಿವಾಸಿ ಲಕ್ಷ್ಮೀ ಪ್ರತಾಪ್ ನಾಯಕ್ ಎಂದು ಗುರುತಿಸಲಾಗಿದೆ.
ಆದಿತ್ಯವಾರ ಸಂಜೆ 7.00 ಗಂಟೆಯ ಸುಮಾರಿಗೆ ಫ್ಲ್ಯಾಟಿನ ಮಹಡಿಯ ಮೇಲೆ ಒಣಗಿಸಲು ಹಾಕಿದ್ದ ತೆಂಗಿನ ಕಾಯಿಯನ್ನು ತರಲು ಹೋಗಿದ್ದು ಅಕಸ್ಮಾತ್ತಾಗಿ ಮಹಡಿಗೆ ಅಳವಡಿಸಲಾಗಿದ್ದ ಫೈಬರ್ ಶೀಟ್ ಮೇಲೆ ಕಾಲಿಟ್ಟಿದ್ದರಿಂದ ಅದು ತುಂಡಾಗಿ ನೇರ ಲಿಫ್ಟ್ ನ ಮೇಲೆ ಬಿದ್ದರು ಅವರ ತಲೆಗೆ ಹಾಗೂ ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟರು.
ಸುದ್ದಿ ತಿಳಿದ ತಕ್ಷಣ ಆಗಮಿಸಿದ ಕುಂದಾಪುರ ಠಾಣಾ ಪೊಲೀಸರು ಲಿಫ್ಟ್ ಜಾಗದಲ್ಲಿ ಸಿಲುಕಿಕೊಂಡ ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಟ್ಟರು ಕೊನೆಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಲಿಫ್ಟ್ ಗೆ ಅಳವಡಿಸಲಾಗಿದ್ದ ಕಬ್ಬಿಣದ ಸಲಾಕೆಗಳನ್ನು ತುಂಡರಸಿ ಮೃತ ದೇಹವನ್ನು ಹೊರತೆಗೆಯಲಾಯಿತು ಕುಂದಾಪುರದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತದೇಹವನ್ನು ನಗರದ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಮೃತರು ನಗರದ ಆಡಿಟರ್ ಪ್ರತಾಪ್ ನಾಯಕ್ ರವರ ಪತ್ನಿಯಾಗಿದ್ದು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…