ಕುಂದಾಪುರ: ಅಪ್ರಾಪ್ತ ಬಾಲಕರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಎರಡು ಪ್ರತ್ಯೇಕ ಪ್ರಕರಣದಲ್ಲಿ ಆರೋಪಿ ಚಂದ್ರ ಕೆ. ಹೆಮ್ಮಾಡಿ ದೋಷಿಯೆಂದು ಉಡುಪಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಒಂದನೇ ಪ್ರಕರಣದಲ್ಲಿ ಸಂತ್ರಸ್ತ 15 ವರ್ಷದ ಬಾಲಕನನ್ನು ಶಾಲೆಯಲ್ಲಿ ಹಾಡುಗಾರನೆಬಂತೆ ಪರಿಚಯಿಸಿಕೊಂಡ ಆರೋಪಿ ಬಾಲಕ ಶಾಲಾ ಆಟದ ಮೈದಾನದಲ್ಲಿರುವಾಗ ಬೈಕ್ ಸವಾರಿ ಮಾಡಿಸುವ ನೆಪದಲ್ಲಿ ಆತನನ್ನು ಶೌಚಾಲಯದೊಳಕ್ಕೆ ಕರೆಯಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ. 23 ಸಾಕ್ಷ್ಯಾಧಾರಗಳ ಪೈಕಿ 15 ಸಾಕ್ಷಿಗಳ ವಿಚಾರಣೆ ನಡೆಸಿದ್ದು ನೊಂದ ಬಾಲಕ ನುಡಿದ ಸಾಕ್ಷಿ ಹಾಗೂ ಸಾಂದರ್ಭಿಕ ಸಾಕ್ಷಿಗಳ ಆಧಾರದಲ್ಲಿ ಚಂದ್ರ ಕೆ. ಹೆಮ್ಮಾಡಿ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ 10 ವರ್ಷ ಕಠಿಣ ಸಜೆ ಹಾಗೂ ನೊಂದ ಬಾಲಕನಿಗೆ 25 ಸಾವಿರ ದಂಡ ನೀಡಲು ಆದೇಶಿಸಿದೆ.
ಮತ್ತೊಂದು ಪ್ರಕರಣವೂ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಚಂದ್ರ ಕೆ. ಹೆಮ್ಮಾಡಿ 13 ವರ್ಷದ ಸಂತ್ರಸ್ತ ಬಾಲಕನನ್ನು ಪರಿಚಯಿಸಿಕೊಂಡು ಗುಹೆ ಫೋಟೋ ತೆಗೆಯಲು ಹೋಗುವುದಿದೆ ಎಂದು ಸ್ನೇಹಿತನೊಂದಿಗೆ ಬೈಕಿನಲ್ಲಿ ಕರೆದೊಯ್ದು ಸ್ನೇಹಿತನಿಗೆ ಆಟವಾಡಲು ಮೊಬೈಲ್ ನೀಡಿ ಬಾಲಕನನ್ನು ಗುಹೆಯೊಳಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ಕಿರುಕುಳ ನೀಡಿದ್ದ ಎನ್ನುವ ಆರೋಪದಡಿ ಪ್ರಕರಣ ದಾಖಲಾಗಿತ್ತು. 22 ಸಾಕ್ಷಿದಾರರ ಪೈಕಿ 14 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ನೊಂದ ಬಾಲಕನ ಸಾಕ್ಷಿ ಹಾಗೂ ಸಾಂದರ್ಭಿಕ ಸಾಕ್ಷಿಗಳು ಅಭಿಯೋಜನೆಗೆ ಪೂರಕವಾಗಿದ್ದು ಅಪರಾಧಿಗೆ 5 ವರ್ಷ ಕಠಿಣ ಸಜೆ ವಿಧಿಸಿದ್ದು ಹಾಗೂ ನೊಂದ ಬಾಲಕನಿಗೆ 25 ಸಾವಿರ ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.
ಈ ಎರಡು ಪ್ರತ್ಯೇಕ ಪ್ರಕರಣದ ದೋಷಾರೋಪಣೆ ಪಟ್ಟಿಯನ್ನು ಅಂದಿನ ಬೈಂದೂರು ಸಿಪಿಐ ಪರಮೇಶ್ವರ ಆರ್. ಗುನಗ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ನೀಡಿದ್ದು ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.
ಇನ್ನು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಒಟ್ಟು 21 ಪ್ರಕರಣ ದಾಖಲಾಗಿತ್ತು. ಅವುಗಳ ಪೈಕಿ ಈ ಹಿಂದೆ ಒಂದು ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು ಇದು ಶಿಕ್ಷೆಗೊಳಪಟ್ಟ ಮೂರನೇ ಪ್ರಕರಣವಾಗಿದೆ. ಇನ್ನು 18 ಪ್ರಕರಣಗಳು ವಿಚಾರಣೆಗೆ ಬಾಕಿಯಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…