ಕುಂದಾಪುರ: ಕಡಲಿಗಿಳಿದ ಯುವಕನೋರ್ವ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ದುರ್ಘಟನೆ ತಾಲೂಕಿನ ಬೀಜಾಡಿಯ ಅರಬ್ಬೀ ಸಮುದ್ರದಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ನೀರು ಪಾಲಾಗಿರುವ ಯುವಕನನ್ನು ತಿಪಟೂರಿನ ನಿವಾಸಿ ಯೋಗೀಶ್ (23) ಎಂದು ಗುರುತಿಸಲಾಗಿದೆ.
ಬುಧವಾರ ಸಂಜೆ ಸ್ನೇಹಿತ ಸಂದೀಪ್ ಎನ್ನುವವರ ಜೊತೆಯಲ್ಲಿ ಬೀಜಾಡಿ ಗ್ರಾಮದ ದಾರಸ್ ಮನೆ ಸಮೀಪದ ಸಮುದ್ರದ ಕಿನಾರೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಡಲಿಗೆ ಇಳಿದಿದ್ದಾರೆ. ಈ ವೇಳೆ ರಕ್ಕಸ ಅಲೆಗಳು ಅಪ್ಪಳಿಸಿದ ಪರಿಣಾಮ ಆಯ ತಪ್ಪಿದ್ದಾರೆ. ಸಮುದ್ರದ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಗೆಳೆಯನ ರಕ್ಷಣೆಗೆ ಪ್ರಯತ್ನಿಸಿದರೂ, ಅವರ ಪ್ರಯತ್ನಗಳು ಯಶಸ್ವಿಯಾಗಲಿಲ್ಲ. ಅಲೆಗಳ ಆರ್ಭಟ ಜೋರಾಗಿಯೇ ಇದ್ದುದ್ದರಿಂದ ಏನೂ ಮಾಡಲು ಸಾಧ್ಯವಾಗದೇ ಬೊಬ್ಬೆ ಹಾಕಿದ್ದಾರೆ. ಸಂದೀಪ್ ಅವರ ಬೊಬ್ಬೆ ಕೇಳಿ ಬಂದ ಸ್ಥಳೀಯರು ಅವರನ್ನು ರಕ್ಷಣೆ ಮಾಡಿ ಬಳಿಕ ಯೋಗೀಶ್ ರಕ್ಷಣೆಗೆ ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ.
ಬೀಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಜಾಡಿ ಮನೆಯ ವಿನಯ್ ಎನ್ನುವವರ ಮನೆಯಲ್ಲಿ ನಡೆಯಬೇಕಾಗಿದ್ದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯೋಗೀಶ್ ಆಗಮಿಸಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಭೇಟಿ ನೀಡಿದ್ದು ನಾಪತ್ತೆಯಾದ ಯುವಕನಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…