Featured

ಕುಂದಾಪುರ: ಈಜಲು ತೆರಳಿದ ಇಬ್ಬರು ನೀರಲ್ಲಿ ಮುಳುಗಿ ಸಾವು – ಮೂವರ  ರಕ್ಷಣೆ – Vishwanews24

ಕುಂದಾಪುರ: ಈಜಲು ತೆರಳಿದ ಇಬ್ಬರು ನೀರಲ್ಲಿ ಮುಳುಗಿ ಸಾವು – ಮೂವರ  ರಕ್ಷಣೆ

ಕುಂದಾಪುರ: ಮದಗದಲ್ಲಿ ಈಜಲು ತೆರಳಿದ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ಕಂದಾವರ ಗ್ರಾಮದ ಮೂಡ್ಲಕಟ್ಟೆಯಲ್ಲಿ ಸಂಭವಿಸಿದೆ‌.

ಭರತ್ ಶೆಟ್ಟಿಗಾರ್ (16) ಹಾಗೂ ರಾಜೇಂದ್ರ ಶೆಟ್ಟಿಗಾರ್ (27) ಸಾವನ್ನಪ್ಪಿದವರು. ಸೋಮವಾರ ಸಂಜೆ ಕಂದಾವರ – ಮೂಡ್ಲಕಟ್ಟೆಯ ಸಮೀಪದ ಮದಗದಲ್ಲಿ ರಾಜೇಂದ್ರ, ಭರತ್ ಹಾಗೂ ಇನ್ನು ಮೂವರು ಬಾಲಕರು ಈಜಲು ನೀರಿಗಿಳಿದಿದ್ದು, ಈ ವೇಳೆ ನಾಲ್ವರು ನೀರಲ್ಲಿ ಮುಳುಗುತ್ತಿದ್ದುದನ್ನು ಕಂಡ ರಾಜೇಂದ್ರ ಅವರು ಮೂವರನ್ನು ರಕ್ಷಿಸಿದ್ದು, ಆದರೆ ಭರತ್ ನನ್ನು ರಕ್ಷಿಸುವಷ್ಟರಲ್ಲಿ ತಾನು ಸಹ ಈಜಲು ಸಾಧ್ಯವಾಗದೇ ಸಾವನ್ನಪ್ಪಿರುವುದಾಗಿ ಸ್ಥಳೀಯರು ಹೇಳಿದ್ದಾರೆ.

ಶಂಕರನಾರಾಯಣ ಸಮೀಪದ ನಿವಾಸಿ ಗಣೇಶ್ ಶೆಟ್ಟಿಗಾರ್ ಅವರ ಪುತ್ರ ಭರತ್ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದು, ಅಜ್ಜಿಮನೆಗೆ ಬಂದಿದ್ದರು. ರಾಜೇಂದ್ರ ಅವರು ಶಂಕರನಾರಾಯಣದ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿದ್ದರು ಎಂದು ತಿಳಿದು ಬಂದಿದೆ.

ಕುಂದಾಪುರ ಅಗ್ನಿ ಶಾಮಕ ದಳದ ಸಿಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳೀಯರ ಸಹಕಾರದೊಂದಿಗೆ ಮೃತದೇಹಗಳನ್ನು ಮೇಲೇತ್ತುವಲ್ಲಿ ಸಹಕರಿಸಿದರು.
ಕುಂದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

3 hours ago