Featured

ಕುಂದಾಪುರ: ಈಜಲು ತೆರಳಿದ ಇಬ್ಬರು ನೀರಲ್ಲಿ ಮುಳುಗಿ ಸಾವು – ಮೂವರ  ರಕ್ಷಣೆ – Vishwanews24

ಕುಂದಾಪುರ: ಈಜಲು ತೆರಳಿದ ಇಬ್ಬರು ನೀರಲ್ಲಿ ಮುಳುಗಿ ಸಾವು – ಮೂವರ  ರಕ್ಷಣೆ

ಕುಂದಾಪುರ: ಮದಗದಲ್ಲಿ ಈಜಲು ತೆರಳಿದ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ಕಂದಾವರ ಗ್ರಾಮದ ಮೂಡ್ಲಕಟ್ಟೆಯಲ್ಲಿ ಸಂಭವಿಸಿದೆ‌.

ಭರತ್ ಶೆಟ್ಟಿಗಾರ್ (16) ಹಾಗೂ ರಾಜೇಂದ್ರ ಶೆಟ್ಟಿಗಾರ್ (27) ಸಾವನ್ನಪ್ಪಿದವರು. ಸೋಮವಾರ ಸಂಜೆ ಕಂದಾವರ – ಮೂಡ್ಲಕಟ್ಟೆಯ ಸಮೀಪದ ಮದಗದಲ್ಲಿ ರಾಜೇಂದ್ರ, ಭರತ್ ಹಾಗೂ ಇನ್ನು ಮೂವರು ಬಾಲಕರು ಈಜಲು ನೀರಿಗಿಳಿದಿದ್ದು, ಈ ವೇಳೆ ನಾಲ್ವರು ನೀರಲ್ಲಿ ಮುಳುಗುತ್ತಿದ್ದುದನ್ನು ಕಂಡ ರಾಜೇಂದ್ರ ಅವರು ಮೂವರನ್ನು ರಕ್ಷಿಸಿದ್ದು, ಆದರೆ ಭರತ್ ನನ್ನು ರಕ್ಷಿಸುವಷ್ಟರಲ್ಲಿ ತಾನು ಸಹ ಈಜಲು ಸಾಧ್ಯವಾಗದೇ ಸಾವನ್ನಪ್ಪಿರುವುದಾಗಿ ಸ್ಥಳೀಯರು ಹೇಳಿದ್ದಾರೆ.

ಶಂಕರನಾರಾಯಣ ಸಮೀಪದ ನಿವಾಸಿ ಗಣೇಶ್ ಶೆಟ್ಟಿಗಾರ್ ಅವರ ಪುತ್ರ ಭರತ್ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದು, ಅಜ್ಜಿಮನೆಗೆ ಬಂದಿದ್ದರು. ರಾಜೇಂದ್ರ ಅವರು ಶಂಕರನಾರಾಯಣದ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿದ್ದರು ಎಂದು ತಿಳಿದು ಬಂದಿದೆ.

ಕುಂದಾಪುರ ಅಗ್ನಿ ಶಾಮಕ ದಳದ ಸಿಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳೀಯರ ಸಹಕಾರದೊಂದಿಗೆ ಮೃತದೇಹಗಳನ್ನು ಮೇಲೇತ್ತುವಲ್ಲಿ ಸಹಕರಿಸಿದರು.
ಕುಂದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago