ಕುಂದಾಪುರ: ಮದಗದಲ್ಲಿ ಈಜಲು ತೆರಳಿದ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ಕಂದಾವರ ಗ್ರಾಮದ ಮೂಡ್ಲಕಟ್ಟೆಯಲ್ಲಿ ಸಂಭವಿಸಿದೆ.
ಭರತ್ ಶೆಟ್ಟಿಗಾರ್ (16) ಹಾಗೂ ರಾಜೇಂದ್ರ ಶೆಟ್ಟಿಗಾರ್ (27) ಸಾವನ್ನಪ್ಪಿದವರು. ಸೋಮವಾರ ಸಂಜೆ ಕಂದಾವರ – ಮೂಡ್ಲಕಟ್ಟೆಯ ಸಮೀಪದ ಮದಗದಲ್ಲಿ ರಾಜೇಂದ್ರ, ಭರತ್ ಹಾಗೂ ಇನ್ನು ಮೂವರು ಬಾಲಕರು ಈಜಲು ನೀರಿಗಿಳಿದಿದ್ದು, ಈ ವೇಳೆ ನಾಲ್ವರು ನೀರಲ್ಲಿ ಮುಳುಗುತ್ತಿದ್ದುದನ್ನು ಕಂಡ ರಾಜೇಂದ್ರ ಅವರು ಮೂವರನ್ನು ರಕ್ಷಿಸಿದ್ದು, ಆದರೆ ಭರತ್ ನನ್ನು ರಕ್ಷಿಸುವಷ್ಟರಲ್ಲಿ ತಾನು ಸಹ ಈಜಲು ಸಾಧ್ಯವಾಗದೇ ಸಾವನ್ನಪ್ಪಿರುವುದಾಗಿ ಸ್ಥಳೀಯರು ಹೇಳಿದ್ದಾರೆ.
ಶಂಕರನಾರಾಯಣ ಸಮೀಪದ ನಿವಾಸಿ ಗಣೇಶ್ ಶೆಟ್ಟಿಗಾರ್ ಅವರ ಪುತ್ರ ಭರತ್ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದು, ಅಜ್ಜಿಮನೆಗೆ ಬಂದಿದ್ದರು. ರಾಜೇಂದ್ರ ಅವರು ಶಂಕರನಾರಾಯಣದ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿದ್ದರು ಎಂದು ತಿಳಿದು ಬಂದಿದೆ.
ಕುಂದಾಪುರ ಅಗ್ನಿ ಶಾಮಕ ದಳದ ಸಿಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳೀಯರ ಸಹಕಾರದೊಂದಿಗೆ ಮೃತದೇಹಗಳನ್ನು ಮೇಲೇತ್ತುವಲ್ಲಿ ಸಹಕರಿಸಿದರು.
ಕುಂದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…