ಕುಂದಾಪುರ: ಮದಗದಲ್ಲಿ ಈಜಲು ತೆರಳಿದ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ಕಂದಾವರ ಗ್ರಾಮದ ಮೂಡ್ಲಕಟ್ಟೆಯಲ್ಲಿ ಸಂಭವಿಸಿದೆ.
ಭರತ್ ಶೆಟ್ಟಿಗಾರ್ (16) ಹಾಗೂ ರಾಜೇಂದ್ರ ಶೆಟ್ಟಿಗಾರ್ (27) ಸಾವನ್ನಪ್ಪಿದವರು. ಸೋಮವಾರ ಸಂಜೆ ಕಂದಾವರ – ಮೂಡ್ಲಕಟ್ಟೆಯ ಸಮೀಪದ ಮದಗದಲ್ಲಿ ರಾಜೇಂದ್ರ, ಭರತ್ ಹಾಗೂ ಇನ್ನು ಮೂವರು ಬಾಲಕರು ಈಜಲು ನೀರಿಗಿಳಿದಿದ್ದು, ಈ ವೇಳೆ ನಾಲ್ವರು ನೀರಲ್ಲಿ ಮುಳುಗುತ್ತಿದ್ದುದನ್ನು ಕಂಡ ರಾಜೇಂದ್ರ ಅವರು ಮೂವರನ್ನು ರಕ್ಷಿಸಿದ್ದು, ಆದರೆ ಭರತ್ ನನ್ನು ರಕ್ಷಿಸುವಷ್ಟರಲ್ಲಿ ತಾನು ಸಹ ಈಜಲು ಸಾಧ್ಯವಾಗದೇ ಸಾವನ್ನಪ್ಪಿರುವುದಾಗಿ ಸ್ಥಳೀಯರು ಹೇಳಿದ್ದಾರೆ.
ಶಂಕರನಾರಾಯಣ ಸಮೀಪದ ನಿವಾಸಿ ಗಣೇಶ್ ಶೆಟ್ಟಿಗಾರ್ ಅವರ ಪುತ್ರ ಭರತ್ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದು, ಅಜ್ಜಿಮನೆಗೆ ಬಂದಿದ್ದರು. ರಾಜೇಂದ್ರ ಅವರು ಶಂಕರನಾರಾಯಣದ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿದ್ದರು ಎಂದು ತಿಳಿದು ಬಂದಿದೆ.
ಕುಂದಾಪುರ ಅಗ್ನಿ ಶಾಮಕ ದಳದ ಸಿಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳೀಯರ ಸಹಕಾರದೊಂದಿಗೆ ಮೃತದೇಹಗಳನ್ನು ಮೇಲೇತ್ತುವಲ್ಲಿ ಸಹಕರಿಸಿದರು.
ಕುಂದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…